ಗಾಂಜಾ ಸೇವನೆ: ಇಬ್ಬರು ವಶಕ್ಕೆ

Update: 2019-02-22 15:48 GMT

ಉಡುಪಿ, ಫೆ.22: ಮಣಿಪಾಲ ವಿದ್ಯಾರತ್ನ ನಗರ ಎಂಬಲ್ಲಿ ಫೆ. 21ರಂದು ಗಾಂಜಾ ಸೇವಿಸುತ್ತಿದ್ದ ಆಂಧ್ರ ಪ್ರದೇಶದ ಕಲ್ಲಮ್ ಚಂದ್ರಶೇಖರ ರೆಡ್ಡಿ (20) ಎಂಬಾತನನ್ನು ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಣಿಪಾಲ: ಅನಂತನಗರದ ಸಾರ್ವಜನಿಕ ರಸ್ತೆಯಲ್ಲಿ ಫೆ.13ರಂದು ಮಧ್ಯಾಹ್ನ ವೇಳೆ ಗಾಂಜಾ ಸೇವನೆ ಮಾಡುತ್ತಿದ್ದ ಹುಡ್ಕೋ ಕಾಲನಿಯ ಸಿಬಿನ್ ಟಿ.ಜೋಸೆಫ್ (19) ಎಂಬಾತನನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದು ಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News