ಜಿ.ಎಸ್.ಬಿ. ಸಮಾಜದ ಮುಖಂಡ ಹರಿಶ್ಚಂದ್ರ ಅಣ್ಣಪ್ಪ ಕಾಮತ್ ನಿಧನ
Update: 2019-02-22 16:23 GMT
ಭಟ್ಕಳ, ಫೆ. 22: ಜಿ.ಎಸ್.ಬಿ. ಸಮಾಜದ ಅಧ್ಯಕ್ಷರು, ವಾಣಿಜ್ಯೋಧ್ಯಮಿಗಳೂ ಆದ ಹರಿಶ್ಚಂದ್ರ ಅಣ್ಣಪ್ಪ ಕಾಮತ್ (81) ಗುರುವಾರ ಸಂಜೆ ಹೃದಯಾಘಾತದಿಂದ ನಿಧನರಾದರು.
ಮೃತರು ಕಳೆದ ಹಲವಾರು ವರ್ಷಗಳಿಂದ ಸಾಮಾಜಿಕವಾಗಿ ತಮ್ಮನ್ನು ತೊಡಗಿಸಿಕೊಂಡು ಸಮಾಜದ ಪ್ರತಿಯೊಂದು ಕಾರ್ಯಕ್ರಮಗಳಲ್ಲಿ ಸಕ್ರಿಯ ರಾಗಿರುತ್ತಿದ್ದರು. ಧಾರ್ಮಿಕ ಕಾರ್ಯಕ್ರಮಗಳನ್ನು ಮುಂಚೂಣಿಯಲ್ಲಿ ನಿಂತು ಮಾಡುತ್ತಿದ್ದ ಅವರು ಸಮಾಜದ ಅಧ್ಯಕ್ಷರಾಗಿ ಯಶಸ್ವಿಯಾಗಿ ಮುನ್ನೆಡೆಸಿಕೊಂಡು ಹೋಗುತ್ತಿದ್ದರು.
ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರನ್ನು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಅನೇಕ ಗಣ್ಯರು ಆಗಮಿಸಿ ಮೃತರ ಅಂತಿಮ ದರ್ಶನ ಪಡೆದರು.
ಮೃತರ ಗೌರವಾರ್ಥ ಸಮಾಜ ಸ್ಥಳೀಯರು ತಮ್ಮ ಅಂಗಡಿಗಳನ್ನು ಮುಚ್ಚಿ ಅಂತಿಮ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು.