ಫೆ. 23ರಂದು ಕಾಲೇಜು ವಿದ್ಯಾರ್ಥಿಗಳಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Update: 2019-02-22 16:26 GMT

ಭಟ್ಕಳ, ಫೆ. 22: ಕಾಲೇಜು ಶಿಕ್ಷಣ ಇಲಾಖೆ, ಸರಕಾರಿ ಪ್ರಥಮದರ್ಜೆಕಾಲೇಜು, ಯುವರೆಡ್‍ಕ್ರಾಸ್‍ಘಟಕ, ಆದರ್ಶ ಆಸ್ಪತ್ರೆ ಉಡುಪಿ ಹಾಗೂ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಫೆ.23ರಂದು ಬೆಳಿಗ್ಗೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಉಚಿತ ಆರೋಗ್ಯ ಶಿಬಿರವನ್ನು ಶಾಸಕ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಸುನಿಲ್ ನಾಯ್ಕ ಉದ್ಘಾಟಿಸುವರು. ಅತಿಥಿಗಳಾಗಿ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಎಂ.ಆರ್. ನಾಯ್ಕ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಧಾಕೃಷ್ಣ ಭಟ್ಟ, ತಾಲೂಕಾ ಆರೋಗ್ಯಾಧಿಕಾರಿ ಡಾ.ಮೂರ್ತಿರಾಜ ಭಟ್ಟ ಉಪಸ್ಥಿತರಿರುವರು.

ಕಾಲೇಜಿನ ಪ್ರಾಂಶುಪಾಲ ಡಾ. ದಸ್ತಗೀರ ರಂಜಾನ ಸಾಹೇಬ ಹಲ್ಯಾಳ  ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News