ಬಿಜೆಪಿ-ಜೆಡಿಎಸ್ ಮೈತ್ರಿಯ ನಿರ್ಧಾರ ಬದಲಿಸಲು ಸಾಧ್ಯವಿಲ್ಲ: ಸಚಿವ ಸಾ.ರಾ ಮಹೇಶ್ ಸ್ಪಷ್ಟನೆ

Update: 2019-02-22 18:36 GMT

ಮೈಸೂರು,ಫೆ.22: ಮೈಸೂರು ಜಿಲ್ಲಾ ಪಂಚಾಯತ್ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ಹಿನ್ನಲೆಯಲ್ಲಿ ನಾವು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದು, ಯಾವುದೇ ಕಾರಣಕ್ಕೂ ನಮ್ಮ ನಿರ್ಧಾರ ಬದಲಿಸಲು ಸಾಧ್ಯವಿಲ್ಲ ಪ್ರವಾಸೋಧ್ಯಮ ಸಚಿವ ಸಾ.ರಾ.ಮಹೇಶ್ ಸ್ಪಷ್ಟಪಡಿಸಿದರು.

ನಗರದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದು ಜಿ.ಪಂ.ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಈ ಹಿಂದೆ ಜೆಡಿಎಸ್-ಬಿಜೆಪಿ ಒಪ್ಪಂದ ಮಾಡಿಕೊಂಡತೆ ಈ ಬಾರಿಯೂ ಒಂದಾಣಿಕೆ ಮುಂದುವರಿಯಲಿದೆ. ಸ್ಥಳೀಯ ಮಟ್ಟದ ಪರಿಸ್ಥಿತಿಗೆ ಅನುಗುಣವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಸಂಬಂಧ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರೊಂದಿಗೆ ಮಾತನಾಡಿದ್ದೇನೆ ಎಂದು ತಿಳಿಸಿದರು.

ಕಳೆದ ಬಾರಿ ಬಿಜೆಪಿ ಬೆಂಬಲ ಪಡೆದು ನಮ್ಮ ಪಕ್ಷ ಅಧ್ಯಕ್ಷ ಸ್ಥಾನ ಪಡೆದಿತ್ತು. ನಾವು ಮಾತುಕೊಟ್ಟಂತೆ ನಡೆದುಕೊಳ್ಳಬೇಕಿದ್ದು, ಹಾಗಾಗಿ ಬಿಜೆಪಿ ಜೊತೆ ಹೊಂದಾಣಿಕೆ ಮುಂದುವರೆಸುತ್ತೇವೆ. ಇದು ಈಗ ಆಗಿರುವ ತೀರ್ಮಾನವಲ್ಲ, ಕಾಂಗ್ರೆಸ್ ಜೊತೆಗಿನ ಸಂಬಂಧ ಹಾಳಾಗಿದ್ದ ವೇಳೆ ಈ ಹಿಂದೆಯೇ ತೀರ್ಮಾನ ಮಾಡಿಕೊಳ್ಳಲಾಗಿತ್ತು. ಈಗಾಗಲೇ ಕಾಂಗ್ರೆಸ್ ನಾಯಕರ ಜೊತೆ ಮಾತನಾಡಿದ್ದು, ಯಾರು ಅಧ್ಯಕ್ಷ ಮತ್ತು ಉಪಾಧ್ಯಕ್ಷ ಆಗಬೇಕು ಎಂದು ನಿರ್ಣಯ ಮಾಡಿಕೊಳ್ಳಲಾಗಿದೆ. ಈ ಸಂದರ್ಭದಲ್ಲಿ ಬದಲಾವಣೆ ಅಗತ್ಯವಿಲ್ಲ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News