ಹನೂರು: ಸಾಮಾಜಿಕ ಲೆಕ್ಕ ಪರಿಶೋಧನೆ ಗ್ರಾಮ ಸಭೆ

Update: 2019-02-22 19:18 GMT

ಹನೂರು,ಫೆ.22: ಉದ್ಯೋಗ ಖಾತ್ರಿ ಯೋಜನೆ ಮೂಲಕ ಸಮಾಜದಲ್ಲಿ ಅತ್ಯಂತ ಕೆಳ ಮಟ್ಟದಲ್ಲಿರುವ ಬಡವರನ್ನು ಅಭಿವೃದ್ದಿಯತ್ತ ಕರೆದುಕೊಂಡು ಹೋಗಲು ಈ ಯೋಜನೆ ಒಂದು ಸೂಕ್ತ ಮಾರ್ಗ ಸೂಚಿಯಾಗಿದೆ ಎಂದು ತಾಪಂ ಸಂಯೋಜಕ ನಾರಾಯಣ್ ತಿಳಿಸಿದರು.

ತಾಲೂಕಿನ ಶಾಗ್ಯ ಗ್ರಾಮ ಪಂಚಾಯತ್ 2018-19ಸಾಲಿನ ಎರಡನೇ ಹಂತದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನೆ ಗ್ರಾಮ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಜೀವನಕ್ಕೆ ಅತ್ಯಂತ ಅವಶ್ಯಕವಾದಂತಹ ಸವಲತ್ತುಗಳನ್ನು ಕೊಳ್ಳಲು ಜೀವನದಲ್ಲಿ ಒಂದು ಆದಾಯ ಮುಖ್ಯ. ಆ ಆದಾಯದ ಮೂಲವನ್ನು ಪಡೆಯಲು ಗ್ರಾಮೀಣ ಮಟ್ಟದಲ್ಲಿ ನರೇಗಾ ಯೋಜನೆ ಮುಖಾಂತರ ಸರ್ಕಾರ ಉದ್ಯೋಗಗಳನ್ನು ಕಲ್ಪಿಸಿದೆ ಎಂದರು.

ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷ ಜಾನ್‍ ಪೌಲ್, ನೂಡಲ್ ಅಧಿಕಾರಿ ಗೌಫಿಯಾ, ರೇಷ್ಮೇ ಇಲಾಖಾಧಿಕಾರಿ ಕೃಷ್ಣಶೆಟ್ಟಿ, ಕಚೇರಿ ಸಿಬ್ಬಂದಿಗಳಾದ ಶಿವಕುಮಾರ್, ಕಂದಾಯ ವಸೂಲಿಗಾರ ಶಿವಲಂಕರಯ್ಯ ಸೇರಿದಂತೆ ಹಲವರು ಹಾಜರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News