ಮಂಗಳೂರು : ಕ್ಯಾಂಪಸ್ ಫ್ರಂಟ್ ನಿಂದ 'ಎಜುನೆಕ್ಷ್ಟ್' ಕಾರ್ಯಾಗಾರ

Update: 2019-02-23 11:36 GMT

ಮಂಗಳೂರು, ಫೆ. 23: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ವತಿಯಿಂದ ಕೇಂದ್ರೀಯ ವಿಶ್ವವಿದ್ಯಾಲಯಗಳ ಪ್ರವೇಶ ಪ್ರಕ್ರಿಯೆ ಮತ್ತು ಉನ್ನತ ಶಿಕ್ಷಣದ ಕುರಿತು 'ಎಜುನೆಕ್ಷ್ಟ್ ಎ ಡೋರ್ ಟು ಸೆಂಟ್ರಲ್ ಯುನಿವರ್ಸಿಟಿ' ಕಾರ್ಯಾಗಾರವು ಮಂಗಳೂರಿನ ಸಹೋದಯ ಸಭಾಭವನದಲ್ಲಿ ನಡೆಯಿತು.

ಕಾರ್ಯಾಗಾರದಲ್ಲಿ ಕ್ಯಾಂಪಸ್ ಫ್ರಂಟ್ ರಾಷ್ಟ್ರೀಯ ಸಮಿತಿ ಸದಸ್ಯ ಹಾಗೂ ಜಾಮಿಯಾ ಮಿಲ್ಲಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿ ಪಿ.ವಿ. ಶುಹೈಬ್ ಮಾರ್ಗದರ್ಶನ ನೀಡಿದರು.

ಮುಖ್ಯ ಅತಿಥಿಯಾಗಿ ಸಂತ ಅಲೋಶಿಯಸ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು ಹಾಗೂ  ಜೆ.ಎನ್.ಯು ಹಳೆ ವಿದ್ಯಾರ್ಥಿಯಾಗಿರುವ ಡಾ. ಜೋಯ್ಸ್ ಸಬೀನಾ ಲೋಬೋ ಮಾತನಾಡಿದರು.

ರಾಜ್ಯಾಧ್ಯಕ್ಷರಾದ ಫಯಾಝ್ ದೊಡ್ಡಮನೆ ಅಧ್ಯಕ್ಷತೆ ವಹಿಸಿದರು ಹಾಗೂ  ಜಿಲ್ಲಾಧ್ಯಕ್ಷ ಮಹಮ್ಮದ್ ಸಾದಿಕ್ ಉಪಸ್ಥಿತರಿದ್ದರು.

ಸುಮಯ್ಯ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News