ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಯುವಕ

Update: 2019-02-23 12:07 GMT

ಮಡಿಕೇರಿ, ಫೆ.23: ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಚರ್ಚ್ ಕಾಂಪ್ಲೆಕ್ಸ್‍ನಲ್ಲಿ ನಡೆದಿದೆ. ನಗರದ ವಿನಾಯಕ ಬಡಾವಣೆ ನಿವಾಸಿ ಸುನೀಲ್(28) ಎಂಬಾತನೇ ಆತ್ಮಹತ್ಯೆಗೆ ಶರಣಾದ ಯುವಕ. 

ನಗರದ ಜನರಲ್ ತಿಮ್ಮಯ್ಯ ವೃತ್ತದ ಬಳಿ ಇರುವ ಚರ್ಚ್ ಕಾಂಪ್ಲೆಕ್ಸ್ ನ ಮಾಂಸದ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ಸುನೀಲ್ ಶುಕ್ರವಾರ ರಾತ್ರಿ ಅಂಗಡಿಯಲ್ಲೇ ತಂಗಿದ್ದಾನೆ. ಶನಿವಾರ ಬೆಳಗ್ಗೆ 8.30ರ ಸಮಯವಾದರೂ ಅಂಗಡಿ ತೆರೆಯದಿರುವುದನ್ನು ಗಮನಿಸಿದ ಅಂಗಡಿ ಮಾಲಕರು ಬಾಗಿಲು ತೆರೆದಾಗ ಸುನೀಲ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಘಟನೆ ಕುರಿತು ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News