ಕೆಪಿಸಿಸಿ ಸಂಪನ್ಮೂಲ ತರಬೇತುದಾರರಾಗಿ ಡಿ.ಬಸವರಾಜ್

Update: 2019-02-23 12:33 GMT

ದಾವಣಗೆರೆ,ಫೆ.23: ಕೆಪಿಸಿಸಿ ಕಾರ್ಯದರ್ಶಿ ಡಿ.ಬಸವರಾಜ್ ಅವರನ್ನು ಕೆಪಿಸಿಸಿಯ ಸಂಪನ್ಮೂಲ ತರಬೇತುದಾರರನ್ನಾಗಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇಮಕ ಮಾಡಿದ್ದಾರೆ. 

ಲೋಕಸಭಾ ಚುನಾವಣೆಗಳು ಸಮೀಸುತ್ತಿರುವ ಈ ಸಮಯದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಯು ಅತ್ಯಂತ ಚೈತನ್ಯ ಶಾಲಿಯಾಗಿ ಕಾರ್ಯನಿರ್ವಹಿಸಬೇಕಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿ ಬೂತ್ ಸಮಿತಿಯ ಅಧ್ಯಕ್ಷರು, ಬೂತ್‍ ಮಟ್ಟದ ಏಜೆಂಟರುಗಳು, ವಿಧಾನಸಭಾ ಕ್ಷೇತ್ರದ ಮುಂಚೂಣಿ ಘಟಕ ಮತ್ತು ವಿಭಾಗಗಳ ಪದಾಧಿಕಾರಿಗಳನ್ನೊಳಗೊಂಡ ಕಾರ್ಯಕರ್ತರಿಗೆ ಎಐಸಿಸಿ ಆದೇಶದಂತೆ ಶಿಬಿರವನ್ನು ಏರ್ಪಡಿಸಿ ತರಬೇತಿ ನೀಡಲು ಡಿ.ಬಸವರಾಜ್‍ ರವರಿಗೆ ಕೆಪಿಸಿಸಿ ಅಧ್ಯಕ್ಷರು ಸೂಚಿಸಿದ್ದಾರೆ.

ಡಿ.ಬಸವರಾಜ್‍ ರವರು ಹುಬ್ಬಳ್ಳಿ-ಧಾರವಾಡ ಈಸ್ಟ್, ಮತ್ತು ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರಗಳ ತರಬೇತುದಾರರಾಗಿ ನೇಮಕಗೊಂಡಿದ್ದು, ಅವರು ಕಾಂಗ್ರೆಸ್ ಪಕ್ಷದ ಇತಿಹಾಸ ಮತ್ತು ಸವಾಲುಗಳು ಹಾಗೂ ಕಾಂಗ್ರೆಸ್ ಪಕ್ಷದ ಸಾಧನೆಗಳು ಮತ್ತು ಬಿಜೆಪಿ ಪಕ್ಷದ ವೈಫಲ್ಯಗಳ ಬಗ್ಗೆ ತರಬೇತಿ ನೀಡಲು ಕೆಪಿಸಿಸಿ ಸೂಚಿಸಿದೆ. ಪ್ರಸ್ತುತ ಹಾವೇರಿ ಜಿಲ್ಲೆಯ ಹಾವೇರಿ ಮತ್ತು ಬ್ಯಾಡಗಿ ವಿಧಾನಸಭಾ ಕ್ಷೇತ್ರಗಳ ಕೆಪಿಸಿಸಿ ವೀಕ್ಷಕರಾಗಿ ಡಿ. ಬಸವರಾಜ್ ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News