ಫೆ.25: ಸಿರಾಜುದ್ಧೀನ್ ಖಾಸಿಮಿ ಬಜಾಲ್‌ಗೆ

Update: 2019-02-23 12:34 GMT


ಮಂಗಳೂರು, ಫೆ.23: ಶಂಸುಲ್ ಉಲಮಾ ಕ್ರಿಯಾ ಸಮಿತಿ ಹಾಗೂ ಸಮಸ್ತ ಕೇರಳ ಸುನ್ನಿ ಸ್ಟೂಡೆಂಟ್ ಫೆಡರೇಶನ್‌ನ ಬಜಾಲ್ ನಂತೂರು ಇದರ ಆಶ್ರಯದಲ್ಲಿ ನಡೆಯಲಿರುವ ಎರಡು ಜೋಡಿ ಬಡ ಹೆಣ್ಣು ಮಕ್ಕಳ ಸಾಮೂಹಿಕ ವಿವಾಹ ಕಾರ್ಯಕ್ರಮದ ಅಂಗವಾಗಿ ಫೆ.25ರಂದು  ಸಂಜೆ 7 ಗಂಟೆಗೆ ಬಜಾಲ್ ನಂತೂರು ಮೈದಾನದಲ್ಲಿ ನಡೆಯುವ ಮತ ಪ್ರವಚನ ಕಾರ್ಯಕ್ರಮದಲ್ಲಿ ಅಂತಾರಾಷ್ಟ್ರೀಯ ವಾಗ್ಮಿ ಅಲ್ ಹಾಫಿಳ್ ಸಿರಾಜುದ್ದೀನ್ ಖಾಸಿಮಿ ಭಾಗವಹಿಸಲಿದ್ದಾರೆ.

ಸೈಯದ್ ಝೈನುಲ್ ಆಬಿದೀನ್ ಜಿಫ್ರಿ ತಂಙಳ್ ಕಾರ್ಯಕ್ರಮದ ನೇತೃತ್ವ ವಹಿಸುವರು. ಮರ್ಹೂಮ್ ಮಿತ್ತಬೈಲ್ ಜಬ್ಬಾರ್ ಉಸ್ತಾದ್, ಅತ್ತಿಪಟ್ಟಿ ಉಸ್ತಾದ್ ಅವರ ಅನುಸ್ಮರಣೆ ಹಾಗೂ ಮಜ್ಲಿಸುನ್ನೂರು ನಡೆಯಲಿದೆ. ಉಸ್ತಾದ್ ಅನ್ಸಾರ್ ಫೈಝಿ ಬುರ್ಹಾನಿ ದುಆಗೈಯುವರು. ಅಝ್ಹರ್ ಫೈಝಿ, ಬೊಳ್ಳೂರು ಉಸ್ತಾದ್ ಉದ್ಘಾಟಿಸುವರು.

ದ.ಕ. ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಧ್ಯಕ್ಷತೆ ವಹಿಸುವರು.

ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ.ಖಾದರ್, ವಿಧಾನ ಪರಿಷತ್ ಸದಸ್ಯ ಬಿ.ಎಂ. ಫಾರೂಕ್, ಕಾರ್ಪೊರೇಟರ್ ಹಾಗೂ ಬಜಾಲ್ ನಂತೂರು ಬದ್ರಿಯಾ ಜುಮಾ ಮಸೀದಿಯ ಅಧ್ಯಕ್ಷ ಅಬ್ದುಲ್ ರವೂಫ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News