ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2019-02-23 16:41 GMT

ಪಡುಬಿದ್ರೆ, ಫೆ.23: ಸರಿಯಾದ ಕೆಲಸ ಇಲ್ಲದ ಚಿಂತೆ ಹಾಗೂ ಕುಡಿತದ ಚಟದಿಂದ ಮಾನಸಿಕವಾಗಿ ನೊಂದ ಹೆಜಮಾಡಿಯ ಜಾನ್ಸನ್ ಡಿಸೋಜ(48) ಎಂಬವರು ಫೆ. 22ರಂದು ರಾತ್ರಿ  ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಕಳ: ವಿಪರೀತ ಮದ್ಯ ಸೇವನೆಯ ಚಟ ಹೊಂದಿದ್ದ ನಿಟ್ಟೆ ಗ್ರಾಮದ ಕಲ್ಲಂಬಾಡಿ ಪದವು ನಿವಾಸಿ ನಾರಾಯಣ ಭಂಡಾರಿ(67) ಎಂಬವರು ಮನ ನೊಂದು ಫೆ.23ರಂದು ಬೆಳಗ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News