ಮೈತ್ರಿ ಸರಕಾರ ತೋಳ್ಬಲ, ಜಾತಿಯ ಬಲದಿಂದ ಅಧಿಕಾರಕ್ಕೆ ಬಂದಿದೆ: ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ

Update: 2019-02-23 16:47 GMT

ವಿಜಯಪುರ, ಫೆ. 23: ರಾಜ್ಯದಲ್ಲಿನ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ಹಣ, ಹೆಂಡ, ತೋಳ್ಬಲ, ಜಾತಿಯ ಬಲದಿಂದ ಅಧಿಕಾರಕ್ಕೆ ಬಂದಿದ್ದು, ಇವರ ಭ್ರಾಂತಿ ಬಿಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿದ್ದಾರೆ. 

ಶನಿವಾರ ನಗರದ ಜಿಲ್ಲಾ ಪಂಚಾಯತ್ ಮೈದಾನದಲ್ಲಿ ಬಿಜೆಪಿಯಿಂದ ಏರ್ಪಡಿಸಿದ್ದ ಮೋದಿ ವಿಜಯ ಸಂಕಲ್ಪ ಯಾತ್ರೆ ಅಂಗವಾಗಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅತೀ ಕಡಿಮೆ ಸ್ಥಾನ ಹೊಂದಿದ ಜೆಡಿಎಸ್‌ಗೆ ಅಧಿಕಾರ ಕೊಟ್ಟರು. ಬಹುಶಃ ದೇಶದ ರಾಜಕೀಯ ಇತಿಹಾಸದಲ್ಲೇ ಇಂಥ ರಾಜಕೀಯ ಎಂದೂ ಕಂಡಿರಲಿಲ್ಲ. ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಸ್ಥಗಿತಗೊಂಡಿದ್ದು, ವರ್ಗಾವಣೆ ದಂಧೆ ಮಿತಿಮೀರಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರತಿಯೊಬ್ಬರ ಮೇಲೆ 50 ಸಾವಿರ ರೂ.ಸಾಲದ ಹೊರೆ ಹೇರಿದ್ದಾರೆ ಎಂದು ದೂರಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News