ಬೆಂಗಳೂರು: ಫೆ. 24 ರಂದು ಕರ್ನಾಟಕ ಮುಸ್ಲಿಂ ಜಮಾಅತ್ ಪ್ರಥಮ ಕಾರ್ಯಕಾರಿಣಿ ಸಭೆ

Update: 2019-02-23 18:20 GMT

ಬೆಂಗಳೂರು,ಫೆ.23: ಕರ್ನಾಟಕ ಮುಸ್ಲಿಂ ಜಮಾಅತ್ ನ ಪ್ರಥಮ ರಾಜ್ಯ ಕಾರ್ಯಕಾರಿಣಿ ಸಭೆ ಫೆ.24 ರಂದು ಬೆಳಿಗ್ಗೆ 11 ಘಂಟೆಗೆ ನಗರದ ಕಾಟನ್ ಪೇಟೆ  ರಸ್ತೆಯಲ್ಲಿರುವ ಲಕ್ಕಡಿ ಶಾ ಆಡಿಟೋರಿಯಂ ನಲ್ಲಿ ರಾಜ್ಯಾದ್ಯಕ್ಷರಾದ ಮೌಲಾನಾ ಸಂಶುಲ್ ಹಕ್ ಖಾದ್ರಿ ಅಲ್ ಹಸನಿ ವಲ್ ಹುಸೈನಿ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. 

ಸಭೆಯಲ್ಲಿ ರಾಜ್ಯದ ವಿವಿಧ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಯಲಿದ್ದು, ಜಿಲ್ಲಾ ಹಾಗು ತಾಲೂಕು ಮಟ್ಟದ ಸಮಿತಿ ರಚನೆ ಬಗ್ಗೆ ಕಾರ್ಯಸೂಚಿಯನ್ನು ರಚಿಸಲಾಗುವುದು. ರಾಜ್ಯದ ವಿವಿಧ ಜಿಲ್ಲೆಗಳಿಂದ ರಾಜ್ಯ ಸಮಿತಿಗೆ ಆಯ್ಕೆಯಾದ ಪ್ರತಿನಿಧಿಗಳು ಸಭೆಯಲ್ಲಿ ಬಾಗವಹಿಸಲಿದ್ದಾರೆ ಎಂದು ಮುಸ್ಲಿಂ ಜಮಾಅತ್ ರಾಜ್ಯ ಪ್ರದಾನ ಕಾರ್ಯದರ್ಶಿ ಎನ್.ಕೆ.ಎಮ್ ಶಾಫಿ ಸಅದಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News