ಮೆಹಂದಿ ಕಾರ್ಯಕ್ರಮದಲ್ಲಿ ಯುವಕರ ಹೊಡೆದಾಟ

Update: 2019-02-23 17:25 GMT

ಮಂಗಳೂರು, ಫೆ.23: ತೋಟಬೆಂಗರೆಯಲ್ಲಿ ಶುಕ್ರವಾರ ರಾತ್ರಿ ನಡೆದ ಮೆಹಂದಿ ಕಾರ್ಯಕ್ರಮವೊಂದರಲ್ಲಿ ಯುವಕರ ಮಧ್ಯೆ ಹೊಡೆದಾಟ ನಡೆದಿದ್ದು, ಒಬ್ಬ ಗಾಯಗೊಂಡಿದ್ದಾರೆ.

ತೋಟಬೆಂಗರೆ ನಿವಾಸಿ ವಿನಯ್ ಸಾಲಿಯಾನ್(30) ಗಾಯಗೊಂಡವರು.

ತೋಟಬೆಂಗರೆಯಲ್ಲಿ ಮೆಹಂದಿ ಕಾರ್ಯಕ್ರಮ ನಡೆಯುತ್ತಿದ್ದಾಗ ಕ್ಷುಲ್ಲಕ ಕಾರಣಕ್ಕೆ ಯುವಕರ ಮಧ್ಯೆ ಮಾತಿಗೆ ಮಾತು ಬೆಳೆದು ಹೊಡೆದಾಟವಾಗಿದೆ.
ಈ ಸಂದರ್ಭ ಭಗತ್ ಮತ್ತು ವಿಜಿತ್ ಎಂಬವರು ವಿನಯ್ ಮೇಲೆ ಏಕಾಏಕಿ ದಾಳಿ ಮಾಡಿದ್ದಾರೆ. ಇದರ ಪರಿಣಾಮ ವಿನಯ್ ತಲೆಗೆ ಗಾಯವಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಘಟನೆಯ ಬಗ್ಗೆ ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News