ಆಂಧ್ರದ ಕರ್ನೂಲ್ ನಲ್ಲಿ ಅಪಘಾತ: ರಾಜ್ಯದ ಪ್ರವಾಸಿಗರನ್ನು ಸುರಕ್ಷಿತವಾಗಿ ಕರೆ ತರಲು ಸರಕಾರ ವ್ಯವಸ್ಥೆ

Update: 2019-02-23 17:53 GMT

ಬೆಂಗಳೂರು, ಫೆ.23: ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಓರ್ವಕಲ್ ಎಂಬಲ್ಲಿ ಅಪಘಾತಕ್ಕೀಡಾದ ಮಂಡ್ಯ ಜಿಲ್ಲೆಯ ಬೆಳ್ಳೂರು ಗ್ರಾಮದ ಪ್ರವಾಸಿಗರನ್ನು ಸುರಕ್ಷಿತವಾಗಿ ವಾಪಸ್ ಕರೆ ತರಲು ರಾಜ್ಯ ಸರಕಾರ ವ್ಯವಸ್ಥೆ ಮಾಡಿದೆ.

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಗ್ರಾಮಸ್ಥರು ಒಂದು ಬಸ್ಸಿನಲ್ಲಿ ಇದೇ ತಿಂಗಳ 18 ರಂದು ಪ್ರವಾಸ ಹೊರಟಿದ್ದರು. ಮಹಾನಂದಿ ದರ್ಶನ ಮುಗಿಸಿಕೊಂಡು ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ನಡೆದು ಗೋವಿಂದಸ್ವಾಮಿ ಎಂಬುವರು ಮೃತಪಟ್ಟಿದ್ದರು. ಉಳಿದಂತೆ ಮೂವರು ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ವಿಷಯ ತಿಳಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಕರ್ನೂಲ್ ಪೊಲೀಸ್ ವರಿಷ್ಠಾಧಿಕಾರಿ ಫಕ್ಕೀರಪ್ಪ ಕಾಗಿನೆಲೆ ಅವರನ್ನು ಸಂಪರ್ಕಿಸಿ ಪ್ರವಾಸಿಗರನ್ನು ಸುರಕ್ಷಿತವಾಗಿ ವಾಪಸ್ ಕಳುಹಿಸುವಂತೆ ಕೋರಿದ್ದು, ಕರ್ನಾಟಕ ಮೂಲದ ಈ ಅಧಿಕಾರಿ ಈ ಪ್ರಯಾಣಿಕರನ್ನು ಬಸ್ ವ್ಯವಸ್ಥೆ ಮಾಡಿ ಕಳುಹಿಸಲು ಕ್ರಮ ವಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News