ಮೂರ್ನಾಡು ಕಾವ್ಯಶ್ರೀ ಗೆ ಜಿಲ್ಲಾ ಯುವ ಪ್ರಶಸ್ತಿಯ ಗರಿ
Update: 2019-02-23 17:59 GMT
ಮಡಿಕೇರಿ, ಫೆ.23: ಮೂರ್ನಾಡುವಿನ ಅನ್ನಪೂರ್ಣೇಶ್ವರಿ ಯುವತಿ ಮಂಡಳಿಯ ಕಾವ್ಯಶ್ರೀ ಗೆ ಜಿಲ್ಲಾ ಮಟ್ಟದ ಅತ್ಯುತ್ತಮ ವೈಯುಕ್ತಿಕ ಯುವ ಪ್ರಶಸ್ತಿ ಲಭಿಸಿದೆ.
ಕರ್ನಾಟಕ ಸರ್ಕಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಈ ಪ್ರಶಸ್ತಿಯನ್ನು ನೀಡಲಾಗಿದೆ. ಕಾವ್ಯಶ್ರೀ ರಾಷ್ಟ್ರ, ರಾಜ್ಯ ಹಾಗೂ ಜಿಲ್ಲಾ ಮಟ್ಟದ ಯುವ ಜನೋತ್ಸವಗಳಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ. ಸ್ಪಚ್ಛತೆ, ಸಾಮಾಜಿಕ ಕಳಕಳಿ ಮತ್ತು ಕ್ರೀಡಾ ಕ್ಷೇತ್ರದಲ್ಲಿನ ಇವರ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ ಎಂದು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್ ತಿಳಿಸಿದ್ದಾರೆ.
ಪ್ರಶಸ್ತಿಯು ಐದು ಸಾವಿರ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ಫೆ.22 ರಂದು ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆದ ಜಿಲ್ಲಾ ಯುವ ಸಮ್ಮೇಳನದಲ್ಲಿ ಜಿಲ್ಲಾ ಯುವ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.