ಗಾಂಜಾ ಸೇವನೆ: ಆರೋಪಿ ಬಂಧನ

Update: 2019-02-23 18:16 GMT

ಮಂಗಳೂರು, ಫೆ.23: ಗಾಂಜಾ ಸೇವೆನೆ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ತಾಲೂಕಿನ ಕಿಲೆಂಜಾರು ಕುಪ್ಪೆಪದವು ಬಳಿ ಬಜ್ಪೆ ಪೊಲೀಸರು ಶನಿವಾರ ವಶಕ್ಕೆ ಪಡೆದಿದ್ದಾರೆ.

ಮಂಗಳೂರು ತಾಲೂಕಿನ ಕಿಲೆಂಜಾರು ಕುಪ್ಪೆಪದವು ನಿವಾಸಿ ಹಂಝ ಬಂಧಿತ ಆರೋಪಿ.

ಕುಪ್ಪೆಪದವು ಹೊಳೆನೀರು ಎಂಬಲ್ಲಿ ಆರೋಪಿ ಯಾವುದೋ ಅಮಲು ಪದಾರ್ಥ ಸೇವಿಸಿದಂತೆ ಕಂಡು ಬಂದಿದ್ದು, ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ತೆರಳಿ ಈತನನ್ನು ಬಂಧಿಸಿದ್ದಾರೆ.

ಆರೋಪಿಯನ್ನು ವಿಚಾರಿಸಲಾಗಿ, ತಾನು ಸಿಗರೇಟಿನಲ್ಲಿ ಗಾಂಜಾ ಸೇವನೆ ಮಾಡಿರುವುದಾಗಿ ಒಪ್ಪಿಕೊಂಡಿದ್ದು, ಆರೋಪಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದಾಗಿ ವೈದ್ಯಾಧಿಕಾರಿ ದೃಢೀಕರಿಸಿದ್ದಾರೆ.

ಈ ಕುರಿತು ಬಜ್ಪೆ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News