ನಮ್ಮ ತಂಟೆಗೆ ಬಂದರೆ ಸುಮ್ಮನಿರುವುದಿಲ್ಲ: ಉಪಮುಖ್ಯಮಂತ್ರಿ ಪರಮೇಶ್ವರ್

Update: 2019-02-26 13:03 GMT

ಬೆಂಗಳೂರು, ಫೆ.26: ಭಾರತೀಯ ವಾಯುಸೇನೆ ನಡೆಸಿರುವ ದಾಳಿ ಪಾಕಿಸ್ತಾನಕ್ಕೆ ಪ್ರತೀಕಾರದ ಉತ್ತರವಾಗಿದ್ದು, ದೇಶದ ತಂಟೆಗೆ ಬಂದರೆ ಸುಮ್ಮನಿರುವುದಿಲ್ಲ ಎಂಬ ಸಂದೇಶ ರವಾನಿಸಿದಂತಾಗಿದೆ ಎಂದು ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಹೇಳಿದರು.

ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಯು ಸೇನೆಯ ದಾಳಿ ವೈಯಕ್ತಿಕವಾಗಿ ಸಮಾಧಾನ ತಂದಿದೆ. ಭಯೋತ್ಪಾದನಾ ಚಟುವಟಿಕೆಗಳಿಗೆ ಮತ್ತಷ್ಟು ಪಾಠ ಕಲಿಸಬೇಕಿದೆ. ಅಷ್ಟೇ ಅಲ್ಲದೆ, ಪಾಕಿಸ್ತಾನ ತೆರೆಮರೆಯಲ್ಲಿ ಭಯೋತ್ಪಾದಕ ಚಟುವಟಿಕೆ ಬೆಂಬಲಿಸುವುದನ್ನು ಬಿಡಬೇಕು ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News