ರೈಲಿನಲ್ಲಿ ಗಾಂಜಾ ಸಾಗಾಟ: ಆರೋಪಿಯ ಬಂಧನ, 10 ಲಕ್ಷ ಮೌಲ್ಯದ ಗಾಂಜಾ ವಶ

Update: 2019-02-27 16:29 GMT

ಬೆಂಗಳೂರು,ಫೆ.27: ರೈಲಿನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಕೇರಳದ ಕಾಸರಗೋಡಿನ ಇಕ್ಬಾಲ್ (22) ಎಂಬಾತನನ್ನು ಬೈಯಪ್ಪನಹಳ್ಳಿ ರೈಲ್ವೆ ಪೊಲೀಸರು ಬಂಧಿಸಿ 20 ಕೆಜಿ ಗಾಂಜಾ ಜಪ್ತಿ ಮಾಡಿದ್ದಾರೆ.

ಆರೋಪಿಯು ಗಾಂಜಾವನ್ನು ಕಣ್ಣೂರು ಎಕ್ಸ್‌ಪ್ರೆಸ್ ರೈಲಿನಲ್ಲಿ ಕೇರಳಕ್ಕೆ ಕಳ್ಳ ಸಾಗಾಣಿಕೆ ಮಾಡಿಕೊಂಡು ಹೋಗುತ್ತಿದ್ದಾಗ ಕಾರ್ಯಾಚರಣೆ ನಡೆಸಿದ ಬೈಯಪ್ಪನಹಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯಿಂದ 10 ಲಕ್ಷ ಮೌಲ್ಯದ 20 ಕೆಜಿ ಗಾಂಜಾ ಜಪ್ತಿ ಮಾಡಿ ತನಿಖೆ ಮುಂದುವರೆಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News