ಕೇಂದ್ರ ಸಾರಿಗೆ ಸಚಿವರ ಕಾರ್ಯದರ್ಶಿಯಿಂದ ತೊಕ್ಕೊಟ್ಟು ಫ್ಲೈಓವರ್ ಕಾಮಗಾರಿ ಪರಿಶೀಲನೆ

Update: 2019-02-28 07:36 GMT

ಮಂಗಳೂರು, ಫೆ.28: ತೊಕ್ಕೊಟ್ಟು ಮೇಲ್ಸೇತುವೆ ಕಾಮಗಾರಿಯನ್ನು ಕೇಂದ್ರ ರಸ್ತೆ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ಸಚಿವರ ಕಾರ್ಯದರ್ಶಿ ವೈಭವ್ ದಾಂಘೆ ಗುರುವಾರ ಪರಿಶೀಲಿಸಿದರು.

ಮಂಗಳೂರಿಗೆ ಇಂದು ಆಗಮಿಸಿದ್ದ ವೈಭವ್ ದಾಂೆಯವರು ಸಂಸದ ನಳಿನ್ ಕಟೀಲು ಜೊತೆ ತೊಕ್ಕೊಟ್ಟಿಗೆ ತೆರಳಿ ಮೇಲ್ಸೇತುವ ಕಾಮಗಾರಿಯನ್ನು ವೀಕ್ಷಿಸಿದರು.

ಈ ಸಂದರ್ಭ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಮಂಗಳೂರು ಮಂಡಲ ಬಿಜೆಪಿ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್, ಚಂದ್ರಹಾಸ್ ಉಳ್ಳಾಲ್, ಚಂದ್ರಶೇಖರ್, ರಾಮಚಂದ್ರ ಬೈಕಂಪಾಡಿ, ಸತೀಶ್ ಕುಂಪಲ, ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳ ಹಾಗೂ ನವಯುಗ ಕಂಪೆನಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News