ನೇಣು ಬಿಗಿದು ಆತ್ಮಹತ್ಯೆ

Update: 2019-02-28 14:20 GMT

ಬೆಂಗಳೂರು, ಫೆ. 28: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ಕೆಂಗೇರಿಯ ದುಬಾಸಿ ಪಾಳ್ಯದಲ್ಲಿ ನಡೆದಿದೆ.

ದುಬಾಸಿ ಪಾಳ್ಯದ 3ನೆ ಕ್ರಾಸ್‌ನ ನೇತ್ರಾವತಿ (32) ಆತ್ಮಹತ್ಯೆ ಮಾಡಿಕೊಂಡವರು. ಗಾರೆ ಕೆಲಸ ಮಾಡುತ್ತಿದ್ದ ಪತಿ ಸುಬ್ರಮಣಿ ಕೆಲಸಕ್ಕೆ, ಮಕ್ಕಳು ಶಾಲೆಗೆ ಹೋಗಿದ್ದಾಗ ಒಂಟಿಯಾಗಿದ್ದ ನೇತ್ರಾವತಿ, ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.

ಯುವಕ ನೇಣು: ಪೀಣ್ಯದ ಮುನಿಸ್ವಾಮಪ್ಪಬಡಾವಣೆಯ ಮಧು (38) ಎಂಬುವರು ನಿನ್ನೆ ನೇಣಿಗೆ ಶರಣಾಗಿದ್ದಾರೆ. ಖಾಸಗಿ ಕಂಪನಿಯಲ್ಲಿ ಕೆಲಸಕ್ಕೆ ಹೋಗುತ್ತಿದ್ದ ಮಧು, ಜೀವನದಲ್ಲಿ ಜಿಗುಪ್ಸೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೀಣ್ಯ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನಿ ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News