×
Ad

ವೀರರಾಣಿ ಅಬ್ಬಕ್ಕ ಉತ್ಸವ ಜನಪದ ದಿಬ್ಬಣಕ್ಕೆ ಚಾಲನೆ

Update: 2019-03-02 21:59 IST

 ಮಂಗಳೂರು, ಮಾ.2: ವೀರರಾಣಿ ಅಬ್ಬಕ್ಕ ಉತ್ಸವದ ಜನಪದ ದಿಬ್ಬಣಕ್ಕೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಡೊಳ್ಳು ಬಾರಿಸುವುದರ ಮೂಲಕ ಶನಿವಾರ ಅಪರಾಹ್ನ 4:10ಕ್ಕೆ ಚಾಲನೆ ನೀಡಿದರು.

ಉಸ್ತುವಾರಿ ಸಚಿವರು ಮಾತನಾಡಿ, ಅಬ್ಬಕ್ಕ ಉತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಡಳಿತ ಬಹುದಿನಗಳಿಂದ ಸಿದ್ಧತೆ ನಡೆಸಿದ್ದು ಕಾರ್ಯಕ್ರಮ ಯಶಸ್ವಿಯಾಗಿದೆ ಎಂದು ಹಾರೈಸಿದರು.

ದಿಬ್ಬಣದಲ್ಲಿ ಒಟ್ಟು 13 ತಂಡಗಳು ಭಾಗವಹಿಸಿದ್ದವು. ವೀರರಾಣಿ ಅಬ್ಬಕ್ಕನ ಟ್ಯಾಬ್ಲೋ ಮತ್ತು ಚೆಂಡೆ, ಕೊಡೆ, ಕೀಲುಕುದುರೆ, ದಫ್, ಕೊರಗರ ಗಜ ಕುಣಿತ, ಹಾಲಕ್ಕಿ ಕುಣಿತ, ವೀರಗಾಸೆ, ಪೂಜಾ ಕುಣಿತ, ಕಂಗೀಲು, ಯಕ್ಷಗಾನ ವೇಷಗಳಿಂದ ಮೆರವಣಿಗೆ ಕಳೆಗಟ್ಟಿತು.

ಮಂಗಳೂರು ಸಹಾಯಕ ಆಯುಕ್ತ ರವಿಚಂದ್ರ ನಾಯಕ್, ತಹಶೀಲ್ದಾರ್ ಗುರುಪ್ರಸಾದ್ ನೇತೃತ್ವದಲ್ಲಿ ಆಯೋಜಿಸಲಾದ ಮೆರವಣಿಗೆ ತಂಡ ಭಾರತ್ ಪ್ರೌಢಶಾಲೆ ಉಳ್ಳಾಲದಿಂದ ಆರಂಭಗೊಂಡ ಮೆರವಣಿಗೆ ಉಳ್ಳಾಲ ಬೀಚ್‌ವರೆಗೆ ಸಾಗಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News