ನೆಲ್ಯಾಡಿ - ಗುಂಡ್ಯ ರಸ್ತೆಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ

Update: 2019-03-03 11:03 GMT

ಕಡಬ, ಮಾ.3: ಚಾಲಕನ ನಿಯಂತ್ರಣ ತಪ್ಪಿದ ಗ್ಯಾಸ್ ಟ್ಯಾಂಕರೊಂದು ಪಲ್ಟಿಯಾದ ಘಟನೆ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಲಾವತ್ತಡ್ಕ ಎಂಬಲ್ಲಿ ರವಿವಾರ ಮಧ್ಯಾಹ್ನ ಸಂಭವಿಸಿದೆ.

ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಗ್ಯಾಸ್ ಟ್ಯಾಂಕರ್ ನೆಲ್ಯಾಡಿ - ಗುಂಡ್ಯ ನಡುವಿನ ಲಾವತ್ತಡ್ಕ ಎಂಬಲ್ಲಿಗೆ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿದ ಟ್ಯಾಂಕರ್ ಪಲ್ಟಿಯಾಗಿದೆ.

ಘಟನೆಯಿಂದಾಗಿ ಗ್ಯಾಸ್ ಸೋರಿಕೆಯಾಗುತ್ತಿದ್ದು, ಹೆದ್ದಾರಿ ಸಂಚಾರದಲ್ಲಿ ತಡೆ ಉಂಟಾಗಿದೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಧಾವಿಸುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ವಾಹನ ಸಂಚಾರ ಸ್ಥಗಿತಗೊಳಿಸಿದ್ದಾರೆ. ವಾಹನಗಳಿಗೆ ಉಪ್ಪಿನಂಗಡಿ, ಕಡಬ, ಕೈಕಂಬ, ಗುಂಡ್ಯ ಮಾರ್ಗವಾಗಿ ಪರ್ಯಾಯ ಸಂಪರ್ಕ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News