ಬೆಳ್ತಂಗಡಿ: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಆರೋಪಿ ಸೆರೆ

Update: 2019-03-04 04:52 GMT

ಬೆಳ್ತಂಗಡಿ, ಮಾ. 3: ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಬಾಲಕಿ ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. 

ಬಳೆಂಜ ಗ್ರಾಮ ನಿವಾಸಿ ಅಶೋಕ್ ಆಚಾರ್ಯ ಆರೋಪಿ ಎಂದು ಗುರುತಿಸಲಾಗಿದೆ.

ಬಾಲಕಿಯ ಕುಟುಂಬದ ಜಾಗದ ಸಮಸ್ಯೆಯನ್ನು ಸರಿಪಡಿಸಿಕೊಡುವುದಾಗಿ ಭರವಸೆ ನೀಡಿ, ಬಾಲಕಿಯ ಮನೆಯವರೊಂದಿಗೆ ಅನ್ಯೋನ್ಯತೆಯನ್ನು ಬೆಳೆಸಿಕೊಂಡಿದ್ದು, ಕಾಲೇಜಿಗೆ ರಜೆ ಇರುವ ದಿನದಲ್ಲಿ ಓದಿಕೊಳ್ಳಲು ತನ್ನ ಕಚೇರಿಗೆ ಬರುವಂತೆಯೂ, ತಾನು ಕಲಿಯಲು ನೆರವಾಗುವುದಾಗಿಯೂ ಹೇಳಿ ಬಾಲಕಿಯನ್ನು ತನ್ನ ಕಚೇರಿಗೆ ಕರೆಸಿಕೊಂಡು ಅಲ್ಲಿ ಈತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಬಾಲಕಿ ನೀಡಿದ ದೂರಿನಂತೆ ಆರೋಪಿ ವಿರುದ್ಧ ಪೋಸ್ಕೊ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News