ಸುಮಲತಾ ಅಂಬರೀಶ್ ಬಿಜೆಪಿಗೆ ಬಂದರೆ ಸ್ವಾಗತ: ಜಗದೀಶ್ ಶೆಟ್ಟರ್

Update: 2019-03-04 14:09 GMT

ಬೆಂಗಳೂರು, ಮಾ.4: ಹಿರಿಯ ನಟಿ ಸುಮಲತಾ ಅಂಬರೀಶ್ ಬಿಜೆಪಿಗೆ ಬಂದರೆ ಸ್ವಾಗತ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.   

ಸೋಮವಾರ ಹುಬ್ಬಳ್ಳಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ ಮಂಡ್ಯ ಟಿಕೆಟ್‌ಗೆ ಪೈಪೋಟಿ ನಡೆಸುತ್ತಿರುವ ಸುಮಲತಾ ಅಂಬರೀಶ್ ಅವರನ್ನು ನಾವು ಬಿಜೆಪಿಗೆ ಬನ್ನಿ ಎಂದು ಆಹ್ವಾನಿಸುವುದಿಲ್ಲ. ಒಂದು ವೇಳೆ ಕಾಂಗ್ರೆಸ್ ಪಕ್ಷದ ಮುಖಂಡರ ವರ್ತನೆಯಿಂದ ಮನನೊಂದು ಸುಮಲತಾ ಅವರು ಬಿಜೆಪಿಗೆ ಬಂದರೆ ಸ್ವಾಗತಿಸುತ್ತೇವೆ ಎಂದು ತಿಳಿಸಿದರು.

ಯಾವುದೇ ಪಕ್ಷದ ಬಾಗಿಲು ಬಡಿಯದೆ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅವರು ಕಣಕ್ಕಿಳಿದರೆ ಮುಂದೆ ಯಾವ ತೀರ್ಮಾನ ಕೈಗೊಳ್ಳಬೇಕು ಎಂಬುದನ್ನು ಪಕ್ಷದ ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದು ಶೆಟ್ಟರ್ ವಿವರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News