7 ಕೋಟಿ ಅನುದಾನದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

Update: 2019-03-04 17:26 GMT

ಬ್ರಹ್ಮಾವರ, ಮಾ.4: ಬ್ರಹ್ಮಾವರ ತಾಲೂಕು ವ್ಯಾಪ್ತಿಯಲ್ಲಿ ಒಟ್ಟು ಏಳು ಕೋಟಿ ಅನುದಾನದಲ್ಲಿ ವಿವಿಧ ಕಾಮಗಾರಿಗಳಿಗೆ ಉಡುಪಿ ಶಾಸಕ ಕೆ.ರಘುಪತಿ ಭಟ್ ಸೋಮವಾರ ಶಂಕುಸ್ಥಾಪನೆ ನೆರವೇರಿಸಿದರು.

ವಾರಾಹಿ ಅಚ್ಚುಕಟ್ಟು ಪ್ರದೇಶ ನಿಧಿಯಡಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಬಿಡುಗಡೆಗೊಂಡ 2 ಕೋಟಿ ರೂ. ಅನುದಾನ ಹಾಗೂ ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿ ಯೋಜನೆಯಡಿ ಬಿಡುಗಡೆ ಗೊಂಡ 5 ಕೋಟಿ ರೂ. ಅನುದಾನದಲ್ಲಿ ಹೇರಂಜೆ, ಚಾಂತಾರು, ಕೆಂಜೂರು, ಹೇರೂರು, ಆರೂರು, ನೀಲಾವರ, ಹೊಸೂರು, ಚೇರ್ಕಾಡಿ, ಕುದಿ, ಹಾವಂಜೆ ಗ್ರಾಪಂ ವ್ಯಾಪ್ತಿಯಲ್ಲಿ ಒಟ್ಟು 14 ಕಾಮಗಾರಿಗಳಿಗೆ ಚಾಲನೆ ನೀಡ ಲಾಯಿತು.
ಈ ಸಂದರ್ಭದಲ್ಲಿ ಉಡುಪಿ ಜಿಪಂ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ಉಡುಪಿ ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್ ಆರೂರು, ಜಿಪಂ ಸದಸ್ಯ ಮೈರ್ಮಾಡಿ ಸುಧಾಕರ ಶೆಟ್ಟಿ, ತಾಪಂ ಸದಸ್ಯರಾದ ಸುಧೀರ್ ಕುಮಾರ್ ಶೆಟ್ಟಿ, ಗೋಪಿ ಕೆ. ನಾಯ್ಕಿ, ಡಾ.ಸುನೀತಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News