ದಲಿತ ಸಮುದಾಯ ಕೈಬಿಡುವುದಿಲ್ಲ ಎಂಬ ನಂಬಿಕೆ ಇದೆ: ಸಂಸದ ಆರ್.ಧ್ರುವನಾರಾಯಣ

Update: 2019-03-04 18:26 GMT

ಮೈಸೂರು,ಮಾ.4: ಲೋಕಸಭ ಚುನಾವಣೆಯಲ್ಲಿ ಈ ಬಾರಿಯೂ ದಲಿತ ಸಮುದಾಯ ನನ್ನನ್ನು ಕೈಬಿಡುವುದಿಲ್ಲ ಎಂಬ ನಂಬಿಕೆ ಇದೆ ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದ ಆರ್.ಧ್ರುವನಾರಾಯಣ ವಿಶ್ವಾಸ ವ್ಯಕ್ತಪಡಿಸಿದರು.

ನಗರದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಎಸ್‍ಪಿ ಪಕ್ಷದಿಂದ ಎನ್.ಮಹೇಶ್ ಮತ್ತು ಬಿಜೆಪಿಯಿಂದ ದಲಿತ ಸಮುದಾಯದ ಪ್ರಬಲ ವ್ಯಕ್ತಿಗಳು ನಿಮ್ಮ ವಿರುದ್ಧ ನಿಂತರೆ ನಿಮಗೆ ತೊಂದರೆಯಾಗುವುದಿಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ದಲಿತ ಸಮುದಾಯ ಕಳೆದ  ಎರಡು ಬಾರಿ ಲೋಕಸಭಾ ಚುನಾವಣೆಯಲ್ಲಿ ನನಗೆ ಅತೀ ಹೆಚ್ಚು ಮತಗಳನ್ನು ನೀಡಿ ಆಶೀರ್ವಾದ ಮಾಡಿ ಗೆಲ್ಲಿಸಿದ್ದಾರೆ. ಈ ಬಾರಿಯೂ ನನನ್ನು ಕೈ ಬಿಡುವುದಿಲ್ಲ ಎಂಬ ನಂಬಿಕೆ ಜೊತೆಗೆ ಎಲ್ಲಾ ಸಮುದಾಯದವರು ಅತೀ ಹೆಚ್ಚು ಮತಗಳನ್ನು ಕಾಂಗ್ರೆಸ್ ಪಕ್ಷಕ್ಕೆ ನೀಡಲಿದ್ದಾರೆ ಎಂದು ಹೇಳಿದರು

ದಲಿತ ಸಮುದಾಯದ ಪರ ನಾನು ಸಾಕಷ್ಟು ಹೋರಾಟ ಮಾಡಿದ್ದೇನೆ. ವಿಧಾನಸಭೆ ಮತ್ತು ಲೋಕಸಭೆಗಳಲ್ಲಿ ಬ್ಯಾಕ್ ಲಾಗ್ ಹುದ್ದೆ ಭರ್ತಿ, ಅಟ್ರಾಸಿಟಿ ಪ್ರಕರಣಗಳ ಬಗ್ಗೆ ಕ್ರಮ ಕುರಿತು ಸಮಯ ಸಂದರ್ಭಗಳಲ್ಲಿ ಮಾತನಾಡಿದ್ದೇನೆ. ಜೊತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ನಮ್ಮ ಸಮುದಾಯಕ್ಕೆ ಯಾವ ಯಾವ ಅನುಕೂಲಗಳು ತಲುಪಬೇಕೊ ಅದನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಹಾಗಾಗಿ ನನಗೆ ದಲಿತ ಸಮುದಾಯದ ಮೇಲೆ ವಿಶ್ವಾಸವಿದ್ದು, ಯಾರೇ ಅಭ್ಯರ್ಥಿಯಾದರೂ ನನನ್ನು ಕೈಬಿಡುವುದಿಲ್ಲ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News