ಮಂಗಳೂರು: ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳ ಬಂಧನ

Update: 2019-03-05 16:14 GMT

ಮಂಗಳೂರು, ಮಾ.5: ಪಣಂಬೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2008ರಲ್ಲಿ ನಡೆದಿದ್ದ ವಂಚನೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಉಡುಪಿ ಜಿಲ್ಲೆಯ ಕಾರ್ಕಳ ಎರ್ಲಪಾಡಿ ನಿವಾಸಿ ಅಶ್ರಫ್ (35) ಎಂಬಾತನನ್ನು ಮಂಗಳವಾರ ಬೈಲೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.

2002ರಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣದಲ್ಲಿ ಭಾಗಿಯಾಗಿದ್ದ ಬಪ್ಪನಾಡು ಸರಕಾರಿ ಆಸ್ಪತ್ರೆಯ ಬಳಿಯ ನಿವಾಸಿ ಕೆ.ಎ.ಇಬ್ರಾಹೀಂ (62) ನ್ಯಾಯಾಲಯಕ್ಕೆ ಹಾಜರಾಗದೆ 17 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ. ಆತನ ಪತ್ತೆಗೆ ವಾರಂಟ್ ಹೊರಡಿಸಲಾಗಿತ್ತು. ಇದೀಗ ಮೂಲ್ಕಿಗೆ ಬಂದ ಬಗ್ಗೆ ಮಾಹಿತಿ ಪಡೆದ ರೌಡಿ ನಿಗ್ರಹದಳದ ಸಿಬ್ಬಂದಿ ಬಂಧಿಸಿದ್ದಾರೆ.

ಇದೇ ಠಾಣೆಯಲ್ಲಿ 2007ರಲ್ಲಿ ದಾಖಲಾಗಿದ್ದ ದೊಂಬಿ ಪ್ರಕರಣದಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎರಡನೇ ಆರೋಪಿ ತಿರುವೈಲ್ ಗ್ರಾಮದ ಕೆತ್ತಿಕಲ್ ನಿವಾಸಿ ಹಬೀಬುಲ್ಲಾ (32) ಎಂಬಾತನನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News