ವ್ಯವಹಾರದಲ್ಲಿ ನಷ್ಟ: ಮನನೊಂದ ವ್ಯಕ್ತಿ ಆತ್ಮಹತ್ಯೆ

Update: 2019-03-05 17:31 GMT

ಬೆಂಗಳೂರು, ಮಾ.5: ವ್ಯವಹಾರದಲ್ಲಿ ನಷ್ಟ ಉಂಟಾದ್ದರಿಂದ ಮನನೊಂದ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಫಾರೆಸ್ಟ್ ಲೇಔಟ್ ನಿವಾಸಿ ಫ್ರಾನ್ಸಿಲ್ ಟೈಸನ್(29) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ ಎಂದು ಪೊಲೀಸರು ತಿಳಿಸಿದ್ದಾರೆ.

ಹೊಟೇಲ್ ನಡೆಸುತ್ತಿದ್ದ ಫ್ರಾನ್ಸಿಲ್ ಟೈಸನ್, ಆರ್ಥಿಕವಾಗಿ ನಷ್ಟಹೊಂದಿದ್ದರು ಎನ್ನಲಾಗಿದೆ. ಇದರಿಂದ ಮನನೊಂದು ಸೋಮವಾರ ಮಧ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕೆಂಗೇರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News