ವರದಕ್ಷಿಣೆ ಕಿರುಕುಳ: ಗೃಹಿಣಿ ಆತ್ಮಹತ್ಯೆ

Update: 2019-03-05 17:45 GMT

ಮೈಸೂರು,ಮಾ.5: ಮನೆಯವರ ವರದಕ್ಷಿಣೆ ಕಿರುಕುಳದಿಂದ ಮನನೊಂದ ಗೃಹಿಣಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನಲ್ಲಿ ನಡೆದಿದೆ.

ಜೆ.ಪಿ ನಗರದ ಜನತಾ ಬಡಾವಣೆಯ ನಿವಾಸಿ ರಾಜೇಂದ್ರ ಅವರ ಪತ್ನಿ ಚಂದ್ರಿಕಾ (27) ಮೃತ ಮಹಿಳೆ ಎಂದು ಗುರುತಿಸಲಾಗಿದೆ.

2012 ರಲ್ಲಿ ಚಂದ್ರಿಕಾ ಮತ್ತು ರಾಜೇಂದ್ರ ವಿವಾಹವಾಗಿದ್ದರು. ಇವರಿಗೆ ಇಬ್ಬರು ಮಕ್ಕಳಿದ್ದು, ವಿವಾಹದ ನಂತರ ಗಂಡನ ಮನೆಯವರು ವರದಕ್ಷಿಣೆ ತರುವಂತೆ ಮಾನಸಿಕ ಮತ್ತು ದೈಹಿಕವಾಗಿ ಹಿಂಸೆ ನಿಡುತ್ತಿದ್ದು, ಇದರಿಂದ ಮನನೊಂದ ಚಂದ್ರಿಕಾ ನೇಣುಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಈ ಕುರಿತು ಚಂದ್ರಕಾ ತಂದೆ ರಾಜಣ್ಣ ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡಿರುವ ವಿದ್ಯಾರಣ್ಯಪುರಂ ಪೊಲೀಸರು ಗಂಡ ರಾಜೇಂದ್ರ, ಅತ್ತೆ ಶಿವನಾಗರತ್ನ, ಮೈದ ವಿರೇಂದ್ರ ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News