ಕಾವೂರು ದೇವಸ್ಥಾನದಲ್ಲಿ ಶಿವರಾತ್ರಿ ಕಾರ್ಯಕ್ರಮಕ್ಕೆ ಪೊಲೀಸರ ಅಡ್ಡಿ: ಖಂಡನೆ

Update: 2019-03-06 11:30 GMT

ಮಂಗಳೂರು, ಮಾ.6: ನಗರದ ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಾ.4ರಂದು ಶಿವರಾತ್ರಿ ಸಮಯದಲ್ಲಿ ನಡೆದ ಯಕ್ಷಗಾನ ಕಾರ್ಯಕ್ರಮಕ್ಕೆ ಪೊಲೀಸರು ಏಕಾಏಕಿಯಾಗಿ ಬಂದು ಅಡ್ಡಿಪಡಿಸಿರುವುದು ಖಂಡನೀಯ. ಈ ಕುರಿತಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಮಾಡಲಾಗಿದೆ ಎಂದು ಮಾಜಿ ಮೇಯರ್ ಹರಿನಾಥ್ ಹೇಳಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಹಳ ಹಳೆಯ ದೇವಸ್ಥಾನ ಅದಕ್ಕೂ ಮಿಗಿಲಾಗಿ ಧಾರ್ಮಿಕ ಕಾರ್ಯಕ್ರಮದಲ್ಲಿ ಈ ರೀತಿಯಾಗಿ ಪೊಲೀಸರು ನಡೆದುಕೊಳ್ಳುವುದು ಸರಿಯಲ್ಲ ಇಂತಹ ಬೆಳವಣಿಗೆ ಮುಂದೆ ನಡೆಯಬಾರದು ಎಂದು ಜಿಲ್ಲಾ ಉಸ್ತುವಾರಿ ಅವರಿಗೆ ಮನವಿ ಮಾಡಿಕೊಳ್ಳಲಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಮನಪಾ ಮುಖ್ಯ ಸಚೇತಕ ಶಶಿಧರ್ ಹೆಗ್ಡೆ, ಪ್ರಮುಖರಾದ ದೀಪಕ್ ಪೂಜಾರಿ, ಉತ್ತಮ ಆಳ್ವ, ಸುಮಂತ್ ರಾವ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News