ಮಂಗನಕಾಯಿಲೆ: ಮಣಿಪಾಲ ಆಸ್ಪತ್ರೆಯಲ್ಲಿ ತೀರ್ಥಹಳ್ಳಿಯ ವ್ಯಕ್ತಿಯ ಮೃತ್ಯು

Update: 2019-03-06 11:48 GMT

ಮಣಿಪಾಲ, ಮಾ.6: ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನಕಾಯಿಲೆ ವ್ಯಾಪಕವಾಗಿದ್ದು, ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಾಗಿದ್ದ ತೀರ್ಥಹಳ್ಳಿಯ ರೋಗಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಮೃತಪಟ್ಟಿರುವುದು ವರದಿಯಾಗಿದೆ.

ಮೃತರನ್ನು ತೀರ್ಥಹಳ್ಳಿಯ ರಾಜು(50) ಎಂದು ಗುರುತಿಸಲಾಗಿದೆ. ಇವರು ಇಂದು ಪೂರ್ವಾಹ್ನ 11 ಗಂಟೆ ಸುಮಾರಿಗೆ ನಿಧನರಾಗಿದ್ದಾರೆ. ಇವರಿಗೆ ಮಂಗನಕಾಯಿಲೆ ಇರುವುದು ವೈದ್ಯಕೀಯ ಪರೀಕ್ಷೆಯಿಂದ ದೃಢಪಟ್ಟಿತ್ತು.

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಇಲ್ಲಿಯವರೆಗೆ ಮಂಗನಕಾಯಿಲೆಯಿಂದ ಏಳು ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News