ಪರ್ಲಡ್ಕ ಹಾಜಿ ಅಬ್ದುಲ್ ಲತೀಫ್ ಸಾಹೇಬ್

Update: 2019-03-06 12:02 GMT

ಪುತ್ತೂರು: ಇಲ್ಲಿನ ಪರ್ಲಡ್ಕದ ಗೋಳಿಕಟ್ಟೆ ನಿವಾಸಿ ಹಾಜಿ ಅಬ್ದುಲ್ ಲತೀಫ್ ಸಾಹೇಬ್(76) ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ಬೆಳಿಗ್ಗೆ ನಿಧನರಾದರು. 

ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಅವರು ಕಟ್ಟಿಗೆ ಮಾರಾಟಗಾರರಾಗಿದ್ದರು. ಪರ್ಲಡ್ಕ ಮುಹಿಯುದ್ದೀನ್ ಜುಮ್ಮಾ ಮಸೀದಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. 

ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಮೂರು ಮಂದಿ ಪುತ್ರಿಯರನ್ನು ಅಗಲಿದ್ದಾರೆ.  ಮೃತರ ದಫನ ಕಾರ್ಯ ಪರ್ಲಡ್ಕ ಮಸೀದಿಯ ಧಫನ ಭೂಮಿಯಲ್ಲಿ ಬುಧವಾರ ಮದ್ಯಾಹ್ನ ನಡೆಯಿತು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ