ಮುಂಡಗೋಡ: ರಸ್ತೆ ಅಪಘಾತಕ್ಕೆ ಯುವಕ ಬಲಿ

Update: 2019-03-07 06:40 GMT

ಮುಂಡಗೋಡ, ಮಾ.7: ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಘಟನೆ ತಾಲೂಕಿನ ಮುಂಡಗೋಡ-ಯಲ್ಲಾಪುರ ರಸ್ತೆಯ ಟಿಬೆಟ್ ಕ್ಯಾಂಪ್ 1ರ ಹತ್ತಿರ ಬುಧವಾರ ರಾತ್ರಿ ಸಂಭವಿಸಿದೆ.

ಮೃತರನ್ನು ಗುಂಜಾವತಿ ಪಂಚಾಯತ್ ವ್ಯಾಪ್ತಿಯ ಬೆಂಡಿಗಟ್ಟಾ ಗ್ರಾಮದ ಜಾನು ಬಾಬು ಗಾವಡೆ(26) ಎಂದು ಗುರುತಿಸಲಾಗಿದೆ.

ಕಾರು ಮತ್ತು ಬೈಕ್ ಒಂದೇ ದಿಕ್ಕಿನಲ್ಲಿ ಹೊರಟಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.

 ಮುಂಡಗೋಡು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News