ಮೂರನೇ ಏಕದಿನ: ಭಾರತ ಫೀಲ್ಡಿಂಗ್ ಆಯ್ಕೆ

Update: 2019-03-08 08:15 GMT

ರಾಂಚಿ, ಮಾ.8: ಮೂರನೇ ಹಾಗೂ ಸರಣಿ ನಿರ್ಣಾಯಕ ಪಂದ್ಯದಲ್ಲಿ ಟಾಸ್ ಜಯಿಸಿದ ಭಾರತದ ನಾಯಕ ವಿರಾಟ್ ಕೊಹ್ಲಿ ಎದುರಾಳಿ ಆಸ್ಟ್ರೇಲಿಯ ತಂಡವನ್ನು ಮೊದಲು ಬ್ಯಾಟಿಂಗ್‌ಗೆ ಆಹ್ವಾನಿಸಿದ್ದಾರೆ.

 ಭಾರತ ಎರಡನೇ ಏಕದಿನ ಪಂದ್ಯದಲ್ಲಿ 8 ರನ್‌ನಿಂದ ರೋಚಕ ಜಯ ಸಾಧಿಸಲು ನೆರವಾಗಿದ್ದ ತಂಡವನ್ನೇ ಮೂರನೇ ಪಂದ್ಯದಲ್ಲಿ ಕಣಕ್ಕಿಳಿಸಿದೆ. ಕಳಪೆ ಫಾರ್ಮ್‌ನಲ್ಲಿರುವ ಶಿಖರ್ ಧವನ್ ಮತ್ತೊಂದು ಅವಕಾಶ ಪಡೆದಿದ್ದಾರೆ. ಪ್ರಮುಖ ವೇಗಿಗಳಾದ ಜಸ್‌ಪ್ರಿತ್ ಬುಮ್ರಾ ಹಾಗೂ ಮುಹಮ್ಮದ್ ಶಮಿ ತಂಡಕ್ಕೆ ಸರಣಿ ಗೆದ್ದುಕೊಟ್ಟು ವಿಶ್ರಾಂತಿ ಮರಳುವ ವಿಶ್ವಾಸದಲ್ಲಿದ್ದಾರೆ.

ಈಗಾಗಲೇ 5 ಪಂದ್ಯಗಳ ಸರಣಿಯಲ್ಲಿ 2-0 ಮುನ್ನಡೆ ಪಡೆದಿರುವ ಕೊಹ್ಲಿ ಪಡೆ ಈ ಪಂದ್ಯವನ್ನು ಜಯಿಸಿದರೆ ಸರಣಿಯನ್ನು ವಶಪಡಿಸಿಕೊಳ್ಳಲಿದೆ. ಮಾಜಿ ನಾಯಕ ಎಂ.ಎಸ್. ಧೋನಿ ತನ್ನ ತವರು ಮೈದಾನದಲ್ಲಿ ಹೆಚ್ಚು-ಕಡಿಮೆ ಕೊನೆಯ ಅಂತರ್‌ರಾಷ್ಟ್ರೀಯ ಪಂದ್ಯವನ್ನು ಆಡಲು ಸಜ್ಜಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News