ಸಾಲಬಾಧೆ: ರೈತ ನೇಣಿಗೆ ಶರಣು
Update: 2019-03-08 17:10 GMT
ಮಂಡ್ಯ, ಮಾ.8: ಕೆ.ಆರ್.ಪೇಟೆ ತಾಲೂಕಿನ ವಳಗೆರೆಮೆಣಸ ಗ್ರಾಮದಲ್ಲಿ ಸಾಲಬಾಧೆ ತಾಳಲಾರದೇ ರೈತರೋರ್ವರು ನೇಣಿಗೆ ಶರಣಾಗಿದ್ದಾರೆ. ಗ್ರಾಮದ ಅಂಜನೀಗೌಡರ ಪುತ್ರ ಜಯಕುಮಾರ್(44) ಮೃತ ರೈತ.
6 ಎಕರೆಯಲ್ಲಿ ಕಬ್ಬು ಮತ್ತು ಬಾಳೆಯನ್ನು ಬೆಳೆದಿದ್ದರು. ಕೊಳವೆ ಬಾವಿಯಲ್ಲಿ ನೀರಿಲ್ಲದ ಕಾರಣ ಬೆಳೆ ಒಣಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿತ್ತು. ನೀರಿಗಾಗಿ ಹಲವು ಕೊಳವೆ ಬಾವಿಯನ್ನು ಕೊರೆಸಲು ಹಾಗೂ ಬೇಸಾಯ ಮಾಡಲು ಲಕ್ಷಾಂತರ ರೂಪಾಯಿ ಕೈಸಾಲ ಮಾಡಿದ್ದರು.
ಸಾಲಗಾರರ ಕಾಟ ಹೆಚ್ಚಾದ ಹಿನ್ನೆಲೆಯಲ್ಲಿ ಮನನೊಂದ ಜಯಕುಮಾರ್ ಶುಕ್ರವಾರ ಮುಂಜಾನೆ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರಿಗೆ ಪತ್ನಿ ಅನಿತಾ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧು-ಬಳಗವಿದೆ
ಘಟನೆ ಬಗ್ಗೆ ಕೆ.ಆರ್.ಪೇಟೆ ಪಟ್ಟಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.