ಗಾಂಧೀ ವಿವೇಕಾನಂದ ಸದ್ಭಾವನ ರಾಜ್ಯ ಪ್ರಶಸ್ತಿಗೆ ಟಿ.ಸತೀಶ್ ಆಯ್ಕೆ

Update: 2019-03-08 17:25 GMT

ಮಂಡ್ಯ, ಮಾ.8: ಬೆಂಗಳೂರಿನ ಬುದ್ಧ ಬಸವ ಗಾಂಧಿ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಕರ್ನಾಟಕ ಗಾಂಧೀ ಸ್ಮಾರಕ ನಿಧಿ ಹಾಗೂ ಗಾಂಧೀ ಶಾಂತಿ ಪ್ರತಿಷ್ಠಾನದ ಸಹಯೋಗದೊಂದಿಗೆ ವಿವಿಧ ಕ್ಷೇತ್ರದ ಸೇವಾ ಸಾಧಕರಿಗೆ ನೀಡಲಾಗುವ 2019 ನೇ ಸಾಲಿನ 'ಗಾಂಧೀ-ವಿವೇಕಾನಂದ ಸದ್ಭಾವನ ರಾಜ್ಯ ಪ್ರಶಸ್ತಿ’ಗೆ ಸಾಂಸ್ಕೃತಿಕ ಸಂಘಟನಾ ಕ್ಷೇತ್ರದ ಸಾಧನೆಗಾಗಿ ಜಿಲ್ಲಾ ಯುವ ಬರಹಗಾರರ ಬಳಗದ ಸಂಸ್ಥಾಪಕ ಅಧ್ಯಕ್ಷ, ಶಿಕ್ಷಕ ಮತ್ತು ಸಾಹಿತಿ ಮಂಗಲದ ಟಿ. ಸತೀಶ್ ಜವರೇಗೌಡ ಅವರು ಆಯ್ಕೆಯಾಗಿದ್ದಾರೆ.

ಮಾ.10 ರಂದು ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜು ಆವರಣದಲ್ಲಿ ಸಾಹಿತಿ ಮತ್ತು ಸಂಶೋಧಕ ಡಾ.ಡಿ.ಕೆ. ಚಿತ್ತಯ್ಯ ಪೂಜಾರ್ ಅವರ ಸಮ್ಮೇಳನಾಧ್ಯಕ್ಷತೆಯಲ್ಲಿ ನಡೆಯಲಿರುವ ಮಹಾತ್ಮ ಗಾಂಧೀಜಿ–ವಿವೇಕಾನಂದ ಪ್ರಣೀತ 'ರಾಜ್ಯಮಟ್ಟದ ಯುವಜನ ಸಮ್ಮೇಳನ'ದ ಸಮಾರೋಪದಲ್ಲಿ ಟಿ.ಸತೀಶ್ ಜವರೇಗೌಡ ಅವರಿಗೆ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ್, ಗಾಂಧೀ ಶಾಂತಿ ಪ್ರತಿಷ್ಠಾನದ ಅಧ್ಯಕ್ಷ ಜೀರಿಗೆ ರಮೇಶ್, ರಾಮನಗರ ಜಿಪಂ ಅಧ್ಯಕ್ಷೆ ಬಿ.ವಿ. ಹಂಸಕುಮಾರಿ ಮೇ.ಚ. ಕೋಟಪ್ಪ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News