ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ: ಓರ್ವ ಸೆರೆ

Update: 2019-03-10 08:01 GMT

ವಿಜಯಪುರ, ಮಾ. 10: ಬಳ್ಳಾರಿಯಿಂದ ಮಹಾರಾಷ್ಟ್ರಕ್ಕೆ ಅನ್ನಭಾಗ್ಯ ಅಕ್ಕಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಅನ್ನಭಾಗ್ಯ ಅಕ್ಕಿ ಹಾಗೂ ಓರ್ವನನ್ನು ಬಂಧಿಸಿರುವ ಘಟನೆ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಝಳಕಿ ಚೆಕ್ ಪೋಸ್ಟ್ ಬಳಿ ನಡೆದಿದೆ.

ಅಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಸ್ತುವಾರಿ ಜಂಟಿ ನಿರ್ದೇಶಕರ ಅಧಿಕಾರಿ ಡಾ. ಔದ್ರಾಮ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು.

ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು 8 ಲಕ್ಷ ರೂ. ಮೌಲ್ಯದ 50 ಕೆಜಿಯ 350 ಅಕ್ಕಿ ಚೀಲ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಕುರಿತು ಝಳಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News