ಪತ್ರಕರ್ತ ನಂದಕುಮಾರ್ ನಿಧನ

Update: 2019-03-10 13:43 GMT

ಬೆಂಗಳೂರು, ಮಾ.10: ಅನಾರೋಗ್ಯದಿಂದ ಬಳಲುತ್ತಿದ್ದ ಪತ್ರಕರ್ತ ನಂದಕುಮಾರ್ ರವಿವಾರ ಮುಂಜಾನೆ ನಿಧನರಾಗಿದ್ದಾರೆ.

ಉದಯ, ಸಮಯ ಸೇರಿದಂತೆ ಹಲವು ಸುದ್ದಿವಾಹಿನಿಗಳಲ್ಲಿ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದ ನಂದಕುಮಾರ್ ಕಳೆದ ಎರಡು ವರ್ಷಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಅವರಿಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು ಎಂದು ತಿಳಿದು ಬಂದಿದೆ.

ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ನಂದಕುಮಾರ್ ಅವರನ್ನು ಉಳಿಸಿಕೊಳ್ಳಲು ವೈದ್ಯರು ಸೇರಿದಂತೆ ಪತ್ರಕರ್ತರ ಒಂದು ತಂಡ ನಿರಂತರವಾಗಿ ಪ್ರಯತ್ನ ಮುಂದುವರೆಸಿತ್ತು. ಆದರೆ, ರವಿವಾರ ಅವರ ನಿವಾಸದಲ್ಲಿ ಕೊನೆಯುಸಿರೆಳೆದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಸಂತಾಪ: ನಂದಕುಮಾರ್ ಅವರ ನಿಧನಕ್ಕೆ ಬೆಂಗಳೂರು ಪ್ರೆಸ್‌ಕ್ಲಬ್, ಬೆಂಗಳೂರು ವರದಿಗಾರರ ಕೂಟ, ಪತ್ರಕರ್ತರ ಸಹಕಾರ ಸಂಘ, ಕಾರ್ಯನಿರತ ಪತ್ರಕರ್ತರ ಸಂಘ ಸೇರಿದಂತೆ ಅನೇಕರು ಕಂಬನಿ ಮಿಡಿದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News