×
Ad

ತುಳುಕೂಟದ ಪಣಿಯಾಡಿ ಪ್ರಶಸ್ತಿಗೆ ತುಳು ಕಾದಂಬರಿ ಹಸ್ತಪ್ರತಿ ಆಹ್ವಾನ

Update: 2019-03-11 19:59 IST

ಉಡುಪಿ, ಮಾ.11: ತುಳುಕೂಟ ಉಡುಪಿ ಇದರ ಆಶ್ರಯದಲ್ಲಿ 25ನೇ ವರ್ಷದ ಎಸ್.ಯು. ಪಣಿಯಾಡಿ ತುಳು ಕಾದಂಬರಿ ಪ್ರಶಸ್ತಿಗಾಗಿ ತುಳು ಕಾದಂಬರಿಗಳ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ.

ತುಳುಭಾಷೆಯಲ್ಲಿ ಉತ್ತಮ ಕಾದಂಬರಿಗಳು ಪ್ರಕಟಗೊಳ್ಳಬೇಕೆಂಬ ಆಶಯ ದಿಂದ ತುಳು ಚಳವಳಿಯ ಪ್ರವರ್ತಕರಾದ ದಿ.ಎಸ್.ಯು.ಪಣಿಯಾಡಿ ಅವರ ನೆನಪಿನಲ್ಲಿ ನೀಡುವ ಈ ಪ್ರಶಸ್ತಿಗೆ ನಿಬಂಧನೆಗಳಿಗೊಳಪಟ್ಟು ಹಸ್ತಪ್ರತಿಗಳನ್ನು ಬರಹಗಾರರಿಂದ ಸ್ವೀಕರಿಸಲಾಗುವುದು.

ನಿಬಂಧನೆಗಳು: ಹಸ್ತಪ್ರತಿಗಳು ತುಳು ಭಾಷಾ ಕಾದಂಬರಿಯದ್ದಾಗಿರಬೇಕು. ಈವರೆಗೆ ಯಾವುದೇ ಬಹುಮಾನಗಳಿಗೆ ಆಯ್ಕೆಯಾಗಿರಬಾರದು. ಇದುವರೆಗೆ ಎಲ್ಲೂ ಮುದ್ರಿತವಾಗಿರಬಾರದು. ಹಸ್ತಪ್ರತಿ ಪ್ರಶಸ್ತಿಗೆ ಆಯ್ಕೆಯಾದರೆ ಮುದ್ರಿಸುವಾಗ ಕ್ರೌನ್ 1/8 ಆಕಾರದಲ್ಲಿ 120 ಪುಟಗಳನ್ನು ಮೀರುವಷ್ಟು ಧೀರ್ಘವಾಗಿರಬೇಕು. ಹಸ್ತಪ್ರತಿಗಳು ಸುಂದರವಾದ ಕೈಬರಹ, ಬೆರಳಚ್ಚು ಅಥವಾ ಕಂಪ್ಯೂಟರ್ ಮುದ್ರಿತ(ಡಿಟಿಪಿ) ರೂಪದಲ್ಲಿರಬಹುದು. ಕಾದಂಬರಿ ತುಳುನಾಡಿನ ಭೌಗೋಳಿಕ ಚಿತ್ರಣ, ತುಳು ಸಂಸ್ಕೃತಿಯನ್ನು ಬಿಂಬಿಸುವ ಅಂಶಗಳಿಂದ ಕೂಡಿದ್ದು, ಪೌರಾಣಿಕ, ಐತಿಹಾಸಿಕ, ಜಾನಪದ, ಸಾಮಾಜಿಕ ವಸ್ತುಗಳನ್ನು ಆಧರಿಸಿರಬಹುದಾಗಿದೆ.

ಪ್ರಶಸ್ತಿಯು 8000 ರೂ. ನಗದು ಸಹಿತ ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಹಸ್ತಪ್ರತಿಯನ್ನು ಎ.30ರೊಳಗೆ ಪ್ರಕಾಶ ಸುವರ್ಣ ಕಟಪಾಡಿ, ಸಂಚಾಲಕರು ಪಣಿಯಾಡಿ ಕಾದಂಬರಿ ಪ್ರಶಸ್ತಿ ಸಮಿತಿ, ಯಶಸ್, ಕೋಟೆ ಬೀಡಿನ ಬಳಿ ಕೋಟೆ ಗ್ರಾಮ ಕಟಪಾಡಿ ಅಂಚೆ ಉಡುಪಿ ಜಿಲ್ಲೆ-574105 ಇಲ್ಲಿಗೆ ಕಳುಹಿಸಿ ಕೊಡಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9964019229, 9844532629ನ್ನು ಸಂಪರ್ಕಿಸುವಂತೆ ಉಡುಪಿ ತುಳುಕೂಟದ ಅಧ್ಯಕ್ಷ ವಿ.ಜಿ. ಶೆಟ್ಟಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News