ನೇರಳಕಟ್ಟೆ : ಬೈಕ್ ಢಿಕ್ಕಿ- ಪಾದಚಾರಿ ಮೃತ್ಯು

Update: 2019-03-12 05:26 GMT

ವಿಟ್ಲ, ಮಾ. 12: ಮಾಣಿ ಸಮೀಪದ ನೇರಳಕಟ್ಟೆಯಲ್ಲಿ ಪಾದಚಾರಿಯೋರ್ವರಿಗೆ ಸೋಮವಾರ ಬೆಳಗ್ಗೆ ಬೈಕ್ ಢಿಕ್ಕಿಹೊಡೆದ ಪರಿಣಾಮ ತಲೆಗೆ ಗಂಭೀರ ಗಾಯಗೊಂಡು ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಂಜೆ ವೇಳೆ ಮೃತಪಟ್ಟಿದ್ದಾರೆ.

ಮೃತರನ್ನು ನೇರಳಕಟ್ಟೆ ಸಮೀಪದ ಪರ್ಲೋಟು ನಿವಾಸಿ  ಬೀಡಿ ಗುತ್ತಿಗೆದಾರ  ಖಾಸೀಂ (68 ) ಎಂದು ಗುರುತಿಸಲಾಗಿದೆ.

ಪುತ್ತೂರು ಕಡೆಯಿಂದ ಮಾಣಿ ಕಡೆಗೆ ಹೋಗುತ್ತಿದ್ದ ಬೈಕ್ ಚಾಲಕನ ಅತೀ ವೇಗ ಹಾಗೂ ಅಜಾಗರೂಕತೆಯ ಚಾಲನೆಯಿಂದಾಗಿ ನೇರಳಕಟ್ಟೆ ಬಸ್ ನಿಲ್ದಾಣ ಎದುರು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಕಾಸಿಂ ಎಂಬವರಿಗೆ ಢಿಕ್ಕಿಹೊಡೆದಿತ್ತು. ತಕ್ಷಣ ಅವರನ್ನು ಪುತ್ತೂರಿನ ಆಸ್ಪತ್ರೆಗೆ ಸಾಗಿಸಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆ ಮೃತಪಟ್ಟರು.

ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News