ಶೆಡ್‌ನಿಂದ ಬಿದ್ದು ಮೃತ್ಯು

Update: 2019-03-12 16:42 GMT

ಮಣಿಪಾಲ, ಮಾ.12: ಶೆಡ್ ಮೇಲೆ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ನೆಲಕ್ಕೆ ಬಿದ್ದು ಮೃತಪಟ್ಟ ಘಟನೆ ಮಣಿಪಾಲದ ಸರಳಬೆಟ್ಟು ಎಂಬಲ್ಲಿ ನಡೆದಿದೆ.

ಮೃತರನ್ನು ಬಡಗುಬೆಟ್ಟು ಗ್ರಾಮದ ಶಾಂತಿನಗರದ ರಂಜನ್ ಕುಮಾರ್ (65) ಎಂದು ಗುರುತಿಸಲಾಗಿದೆ. ಇವರು ಮಾ. 9ರಂದು ಸರಳಬೆಟ್ಟುವಿನ ರತ್ನಾಕರ ಎಂಬವರ ಮನೆಯ ತೋಟದಲ್ಲಿರುವ ಶೆಡ್‌ನ ಮೇಲೆ ಕೆಲಸ ಮಾಡುತ್ತಿದ್ದಾಗ ಆಸ್ಮಿಕವಾಗಿ ಕೆಳಗೆ ಬಿದ್ದರೆನ್ನಲಾಗಿದೆ.

ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಇವರು, ಮಾ.12ರಂದು ಬೆಳಗ್ಗೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News