ಬಸ್-ವ್ಯಾನ್ ನಡುವೆ ಅಪಘಾತ: ಒಂದೇ ಕುಟುಂಬದ ಮೂವರು ಮೃತ್ಯು

Update: 2019-03-13 04:18 GMT

ಹಾಸನ, ಮಾ.13: ಸರಕಾರಿ ಬಸ್ ಮತ್ತು ವ್ಯಾನ್‌ವೊಂದರ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ಘಟನೆ ಅರಸೀಕೆರೆ ತಾಲೂಕಿನ ದೇವರಸನಹಳ್ಳಿ ಎಂಬಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.

ಮೃತರನ್ನು ತುಮಕೂರು ಜಿಲ್ಲೆಯ ನಿವಾಸಿಗಳಾದ ಮುಜೀಬಾ(53), ಸಾದಿಕ್(22) ಹಾಗೂ ಮುಷ್ಕಾನ್(19) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ನಾಲ್ವರುಗಾಯಗೊಂಡಿದ್ದಾರೆ.

ಈ ಅಪಘಾತ ನಿನ್ನೆ ತಡರಾತ್ರಿ 1:30ರ ಸುಮಾರಿಗೆ ಸಂಭವಿಸಿದೆ. ಕೆಎಸ್ಸಾರ್ಟಿಸಿ ಬಸ್ ಮತ್ತು ಮಾರುತಿ ವ್ಯಾನ್ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ ಎಂದು ತಿಳಿದುಬಂದಿದೆ. ಗಾಯಾಳುಗಳಾದ ಶಾಲಿನ್ ಬಾನು, ಇಮ್ರಾನ್ ಅಹ್ಮದ್, ಶಾಲಿನ್ ತಾಜ್ ಹಾಗೂ ಮುಹಮ್ಮದ್ ಶಾಲಿನ್ ಎಂಬವರನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News