ಕ್ಷುಲ್ಲಕ ಕಾರಣಕ್ಕೆ ಪತ್ನಿಯ ಕೊಲೆ ಪ್ರಕರಣ: ಟೆಕ್ಕಿ ಬಂಧನ

Update: 2019-03-13 15:39 GMT

ಬೆಂಗಳೂರು, ಮಾ.13: ಕ್ಷುಲ್ಲಕ ಕಾರಣಕ್ಕೆ ಪತ್ನಿಯ ಮೇಲೆ ಹಲ್ಲೆ ನಡೆಸಿ, ಕೊಲೆಗೈದಿದ್ದ ಪ್ರಕರಣ ಸಂಬಂಧ ಆರೋಪಿ ಪತಿ ಟೆಕ್ಕಿ ಅನ್ನು ಇಲ್ಲಿನ ಎಚ್‌ಎಎಲ್ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಶ್ರೀನಿವಾಸ ರೆಡ್ಡಿ (32) ಬಂಧಿತ ಆರೋಪಿ ಎಂದು ತಿಳಿದುಬಂದಿದ್ದು, ಈತನ ಪತ್ನಿ ವೆಂಗಮ್ಮ(20) ಕೊಲೆಯಾದ ಮಹಿಳೆ. ದಂಪತಿಗಳಿಬ್ಬರೂ ಪ್ರತಿಷ್ಠಿತ ಕಂಪೆನಿಯೊಂದರಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದರು. ಆದರೆ ಪತ್ನಿ, ಮೊಬೈಲ್ ನಲ್ಲಿ ಇತರರೊಂದಿಗೆ ಸಂಪರ್ಕ ಹೊಂದಿದ್ದಳು ಎಂದು ಶಂಕಿಸಿ ಶ್ರೀನಿವಾಸ ರೆಡ್ಡಿ ಬೆಂಗಳೂರಿನ ಎಚ್‌ಎಎಲ್ ಬಳಿ ಮಾ.9 ರಂದು ಕೊಲೆ ಮಾಡಿದ್ದ ಎಂದು ತಿಳಿದುಬಂದಿದೆ.

ಆರೋಪಿಯನ್ನು ಪೊಲೀಸರು ಬಂಧಿಸಿ ಇಲ್ಲಿನ ಎಚ್‌ಎಎಲ್ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News