ಹಲವರ ಮತ ರದ್ದು ಆರೋಪ: ಚುನಾವಣೆ ಆಯೋಗಕ್ಕೆ ಬಿಜೆಪಿ ದೂರು

Update: 2019-03-13 15:55 GMT

ಬೆಂಗಳೂರು, ಮಾ.13: ಕೆಲವು ಅಪಾರ್ಟ್‌ಮೆಂಟ್‌ಗಳಲ್ಲಿ ನೆಲೆಸಿರುವ ವ್ಯಕ್ತಿಗಳ ಮತಗಳನ್ನು ರದ್ದು ಮಾಡಲಾಗಿದೆ ಎಂದು ಆರೋಪಿಸಿ ಚುನಾವಣೆ ಆಯೋಗಕ್ಕೆ ಬಿಜೆಪಿ ನಾಯಕರು ದೂರು ಸಲ್ಲಿಸಿದರು.

ನಗರದ ಶೇಷಾದ್ರಿ ರಸ್ತೆಯ ಮುಖ್ಯ ಚುನಾವಣಾಧಿಕಾರಿಗಳಿಗೆ ದೂರು ಸಲ್ಲಿಸಿದ ಸಿ.ಟಿ.ರವಿ, ನಗರ ವ್ಯಾಪ್ತಿಯ ಕೆಲವು ಅಪಾರ್ಟ್‌ಮೆಂಟ್‌ಗಳ ನಿವಾಸಿಗಳ ಮತಗಳು ರದ್ದು ಆಗಿವೆ. ಈ ಬಗ್ಗೆ ಆಯುಕ್ತರಿಗೆ ಮನವಿ ನೀಡಲಾಗಿದೆ. ಅವರು ಕ್ರಮ ಜರುಗಿಸುವ ಭರವಸೆ ನೀಡಿದ್ದಾರೆ ಎಂದು ಹೇಳಿದರು.

ಇದೇ ವೇಳೆ ಮಾಜಿ ಸಚಿವ ಎ.ಮಂಜು ಬಿಜೆಪಿಗೆ ಬರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಅಪರಾಧ ಹಿನ್ನೆಲೆ ಇಲ್ಲದ ಯಾರನ್ನು ಬೇಕಾದರೂ ಪಕ್ಷಕ್ಕೆ ಸೇರಿಸಿಕೊಳ್ಳಬಹುದು. ನಾವು ಮಾತಾಡಿದರೆ ಅದು ವೈಯಕ್ತಿಕ ಅಭಿಪ್ರಾಯ ಆಗುತ್ತೆ. ಪಾರ್ಲಿಮೆಂಟರಿ ಬೋರ್ಡ್ ಯಾವ ಕ್ಷೇತ್ರಕ್ಕೆ ಯಾವ ಅಭ್ಯರ್ಥಿ ಎಂದು ನಿರ್ಧರಿಸಲಿದೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News