ಮತದಾನ ಜಾಗೃತಿ ಕಾರ್ಯಕ್ರಮಗಳ ವೇಳಾಪಟ್ಟಿ ತಯಾರಿಸಿ -ಸಿಂಧೂ ಬಿ.ರೂಪೇಶ್ ಸೂಚನೆ

Update: 2019-03-13 16:28 GMT

ಉಡುಪಿ, ಮಾ.13: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನದ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಕೈಗೊಳ್ಳುವಾಗ ಎಲ್ಲಾ ಇಲಾಖೆಯವರು ತಾವು ಮುಂದಿನ ದಿನಗಳಲ್ಲಿ ನಡೆಸುವ ಕಾರ್ಯಕ್ರಮದ ವೇಳಾಪಟ್ಟಿಯನ್ನು ತಯಾರಿಸಿ ಗುರುವಾರ ಸ್ವೀಪ್ ಸಮಿತಿಗೆ ನೀಡುವಂತೆ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷೆ ಸಿಂಧೂ ಬಿ. ರೂಪೇಶ್ ಹೇಳಿದ್ದಾರೆ.

ಬುಧವಾರ ಜಿಪಂನಲ್ಲಿ ನಡೆದ ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸ್ವೀಪ್ ಸಮಿತಿಯ ವತಿಯಿಂದ ಕೈಗೊಳ್ಳಬೇಕಾದ ಮತದಾನ ಜಾಗೃತಿ ಕಾರ್ಯಕ್ರಮದ ಅನುಷ್ಠಾನ ಕುರಿತ ಸೆಯಲ್ಲಿ ಅವರು ಮಾತನಾಡುತಿದ್ದರು.

ಮತದಾನದ ಜಾಗೃತಿ ನೀಡುವ ಸಲುವಾಗಿ ಎಲ್ಲಾ ಇಲಾಖೆಗಳು ಕಾರ್ಯ ಪ್ರವೃತ್ತರಾಗಬೇಕು. ಇಲಾಖೆ ಅಧಿಕಾರಿಗಳು ನಡೆಸಬೇಕೆಂದಿರುವ ಕಾರ್ಯಕ್ರಮ ಗಳ ಯೋಜನೆಯನ್ನು ಹಾಕಿಕೊಳ್ಳುವಂತೆ ಸೂಚನೆ ನೀಡಿದರು. ಯಾವುದೇ ಕಾರ್ಯಕ್ರಮ ನಡೆಸುವಾಗ ನೀತಿ ಸಂಹಿತೆಯ ಚೌಕಟ್ಟಿನಲ್ಲೇ ನಡೆಸಬೇಕು ಹಾಗೂ ರ್ಯಾಲಿ ಮುಂತಾದ ಕಾರ್ಯಕ್ರಮಗಳನ್ನು ನಡೆಸುವಾಗ ಯಾವುದೇ ಪಕ್ಷವನ್ನು ಸೂಚಿಸುವ ಚಿಹ್ನೆ ಅಥವಾ ಸ್ಟಿಕ್ಕರ್ ಮುಚ್ಚುವಂತೆ ನೆಹರು ಯುವ ಕೇಂದ್ರದ ಜಿಲ್ಲಾ ಕೋ-ಆರ್ಡಿನೇಟರ್‌ಗೆ ಸೂಚಿಸಿದರು.

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಲ್ಲಿ ಯುವ ಮತದಾರರ ಸಂಖ್ಯೆ ಹೆಚ್ಚಿದ್ದು, ಅವರಿಗೆ ಮತದಾನದ ಕುರಿತು ಜಾಗೃತಿ ಅಗತ್ಯವಾಗಿದೆ. ಆದರೆ ಪ್ರಸ್ತುತ ಪರೀಕ್ಷೆ ನಡೆಯುತ್ತಿರುವ ಕಾರಣ ವಿದ್ಯಾರ್ಥಿಗಳ ಲ್ಯತೆ ಕಷ್ಟವಾಗಿದ್ದು, ವಿದ್ಯಾರ್ಥಿಗಳಿಗೆ ವಾಟ್ಸಪ್ ಮೂಲಕ ಮತದಾನದ ಕುರಿತ ಮಾಹಿತಿ ನೀಡುವುದು, ವಿದ್ಯಾರ್ಥಿ ಗಳ ಪೋಷಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಕೈಗೊಳ್ಳಬೇಕು. ಶಿಕ್ಷಣದ ಕುರಿತು ಮಾರ್ಗದರ್ಶನ ನೀಡುವ ಕಾರ್ಯಕ್ರಮಗಳನ್ನು ನಡೆಸಿ ವಿದ್ಯಾರ್ಥಿ ಗಳಿಗೆ ಚುನಾವಣೆಯ ಕುರಿತ ವಿನೂತನ ಕಾರ್ಯಕ್ರಮಗಳನ್ನು ನಡೆಸಿ ಇವಿಎಂ ಮತಯಂತ್ರದ ಕುರಿತು ಮಾಹಿತಿ ನೀಡಿ ಪ್ರಾತ್ಯಕ್ಷಿಕೆಯನ್ನು ನಡೆಸಬಹುದು ಎಂದು ಪದವಿ ಪೂರ್ವ ಹಾಗೂ ವೃತ್ತಿ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಸೂಚನೆ ನೀಡಿದರು.

ಎಲ್ಲಾ ಇಲಾಖೆಗಳ ಅಧಿಕಾರಿಗಳು ಸ್ವಯಂಪ್ರೇರಿತವಾಗಿ ಆಸಕ್ತಿ ವಹಿಸಿ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕು. ಮೀನುಗಾರ ಮತದಾರರಿಗೆ ಜಾಗೃತಿ ಮೂಡಿಸುವ ಸಲುವಾಗಿ ಇವಿಎಂ ಮತಯಂತ್ರದ ಪ್ರಾತ್ಯಕ್ಷಿಕೆ ನಡೆಸಬೇಕು ಹಾಗೂ ಮತದಾನದ ದಿನವನ್ನು ತಿಳಿಸಬೇಕು. ಅಲ್ಲದೇ ಮೀನುಗಾರಿಕೆಗೆ ತೆರಳುವವರು ಹಿಂದಿರುಗಲು 10 ರಿಂದ 15 ದಿನಗಳಾಗುತ್ತದೆ. ಆದ ಕಾರಣ ಮೀನುಗಾರಿಕೆಗೆ ತೆರಳುವ ಮೀನುಗಾರರಿಗೆ ಮತದಾನದ ದಿನಾಂಕವನ್ನು ತಿಳಿಸಿ ಮತದಾನದ ದಿನದಂದು ತಮ್ಮ ವ್ಯಾಪ್ತಿಯ ಮತಗಟ್ಟೆಗಳಲ್ಲಿ ಮತಚಲಾಯಿಸಲು ತಿಳಿಸಬೇಕು ಎಂದು ಮೀನುಗಾರಿಕಾ ಇಲಾಖೆ ಉಪ ನಿರ್ದೇಶಕರಿಗೆ ತಿಳಿಸಿದರು.

ಜಿಪಂ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ್ ರಾವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News