ವಿಜಯಪುರ: ಕಾಂಗ್ರೆಸ್ ಮುಖಂಡ ನಾರಾಯಣ ಪಾಂಚಾಳ ನಿಧನ

Update: 2019-03-13 17:21 GMT

ವಿಜಯಪುರ,ಮಾ.13: ಕಾಂಗ್ರೆಸ್ ಮುಖಂಡ ನಾರಾಯಣ ಪಾಂಚಾಳ(62) ಅನಾರೋಗ್ಯದಿಂದ ನಗರದಲ್ಲಿ ಇಂದು ನಿಧನ ಹೊಂದಿದರು.  

ಕಳೆದ 40 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿ ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದ ಇವರು ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ, ಕೆಪಿಸಿಸಿ ಸದಸ್ಯರಾಗಿ ಹಲವಾರು ವರ್ಷಗಳ ಕಾಲ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿ ಚಟುವಟಿಕೆಗಳನ್ನು ನೋಡಿಕೊಳ್ಳುವಲ್ಲಿ ಸಕ್ರೀಯರಾಗಿದ್ದರು. ನಗರದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯ ನಿರ್ಮಾಣದಲ್ಲಿ ಇವರು ಮುಖ್ಯ ಪಾತ್ರ ವಹಿಸಿದ್ದರು. ಕಳೆದ ಅವಧಿಯಲ್ಲಿ ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿ ಹಾಗೂ ಮಹಾನಗರ ಪಾಲಿಕೆ ಸದಸ್ಯರಾಗಿ ಸರ್ಕಾರದಿಂದ ನಾಮನಿರ್ದೇಶನ ಹೊಂದಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದು, ನಾಳೆ ಬೆ.11 ಗಂಟೆಗೆ ಜೋರಾಪುರ ಪೇಠೆಯಲ್ಲಿರುವ ಅವರ ನಿವಾಸದಿಂದ ಅಂತಿಮ ಯಾತ್ರೆ ಹೊರಟು ಸೋಲಾಪುರ ರಸ್ತೆಯಲ್ಲಿರುವ ದೇವಗಿರಿ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೇರವೇರಲಿದೆ.

ನಾರಾಯಣ ಪಾಂಚಾಳ ನಿಧನಕ್ಕೆ ಗೃಹ ಸಚಿವ ಎಂ.ಬಿ.ಪಾಟೀಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರವಿಗೌಡ ಪಾಟೀಲ, ಬಿಡಿಎ ಮಾಜಿ ಅಧ್ಯಕ್ಷ, ಕೆಪಿಸಿಸಿ ಸದಸ್ಯ ಚಂದ್ರಕಾಂತ ಶೆಟ್ಟಿ, ಕಾಂಗ್ರೆಸ್ ಸೇವಾದಳ ಅಧ್ಯಕ್ಷ ಡಾ.ಗಂಗಾಧರ ಸಂಬಣ್ಣಿ, ಕೆಪಿಸಿಸಿ ಕಾರ್ಯದರ್ಶಿಗಳಾದ ಸಂಗಮೇಶ ಬಬಲೇಶ್ವರ, ಹಾಸಿಂಪೀರ ವಾಲೀಕಾರ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News