ಪಕ್ಷದ ಬಲವರ್ಧನೆಗಾಗಿ ರಾಜ್ಯ ಪ್ರವಾಸ: ಖಾಲಿದ್ ಉಜಿರೆಗೆ ಸನ್ಮಾನ
Update: 2019-03-14 12:15 GMT
ಮಂಗಳೂರು, ಮಾ.14: ಕಾಂಗ್ರೆಸ್ ಪಕ್ಷದ ಬಲವರ್ಧನೆಗಾಗಿ ಫೆಬ್ರವರಿ-ಮಾರ್ಚ್ನಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ವಿವಿಧ ಜಿಲ್ಲೆಗಳಲ್ಲಿ ಮೂರು ಸಾವಿರಕ್ಕೂ ಅಧಿಕ ಕಾರ್ಯಕರ್ತರಿಗೆ ತರಬೇತಿ ನೀಡಿದ ದ.ಕ. ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಹಾಗೂ ತರಬೇತುದಾರ ಖಾಲಿದ್ ಉಜಿರೆ ಅವರನ್ನು ತೊಕ್ಕೊಟ್ಟಿನಲ್ಲಿ ಜರುಗಿದ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಸನ್ಮಾನಿಸಿದರು.
ಈ ಸಂದರ್ಭ ತಾಪಂ ಅಧ್ಯಕ್ಷ ಮುಹಮ್ಮದ್ ಮೋನು, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಕೆಪಿಸಿಸಿ ಪ್ರಚಾರ ಸಮಿತಿಯ ಸಂಚಾಲಕ ಈಶ್ವರ್ ಉಳ್ಳಾಲ್, ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಎನ್.ಎಸ್. ಕರೀಂ, ಕಾರ್ಪೊರೇಟರ್ ಲತೀಫ್ ಕಂದಕ್, ಅಲ್ಪಸಂಖ್ಯಾತ ಘಟಕ ಕರಾವಳಿ ವಲಯದ ಅಧ್ಯಕ್ಷ ಯು.ಬಿ ಸಲೀಂ, ಉಳ್ಳಾಲ ನಗರ ಕಾಂಗ್ರೆಸ್ ಮುಖಂಡ ಬಾಝಿಲ್ ಡಿಸೋಜ, ಉಸ್ಮಾನ್ ಕಲ್ಲಾಪು, ಮುಸ್ತಫಾ ಉಳ್ಳಾಲ, ಆಲ್ವಿನ್ ಡಿಸೋಜ ಉಪಸ್ಥಿತರಿದ್ದರು.