ಬಂಡೀಪುರದಲ್ಲಿ ಮತ್ತೆ ಬೆಂಕಿ: ನೂರಾರು ಎಕರೆ ಅರಣ್ಯ ಭಸ್ಮ

Update: 2019-03-14 15:19 GMT
ಸಾಂದರ್ಭಿಕ ಚಿತ್ರ

ಚಾಮರಾಜನಗರ,ಮಾ.14: ಬಂಡೀಪುರದಲ್ಲಿ ಮತ್ತೆ ಬೆಂಕಿ ಕಾಣಿಸಿಕೊಂಡಿದ್ದು, ನೂರಾರು ಎಕರೆ ಅರಣ್ಯ ಬೆಂಕಿಗಾಹುತಿಯಾಗಿದೆ.

ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ ಕುಂದಕೆರೆ ವಲಯದ ವ್ಯಾಪ್ತಿಯಲ್ಲಿರುವ ಕಣಿಯನಪುರ ಕಾಲನಿ ಸಮೀಪವಿರುವ ಸೆರಾಯ್ ರೆಸಾರ್ಟ್ಸ್ ಬಳಿ ಇಂದು ಮದ್ಯಾಹ್ನ ಸುಮಾರು 3.40 ರ ವೇಳೆ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ.

ಬೆಂಕಿ ನಂದಿಸಲು ಅರಣ್ಯ ಇಲಾಖೆ ಸಿಬ್ಬಂದಿಗಳು ಪ್ರಯತ್ನ ಪಡುತ್ತಿದ್ದರೂ ಸಹ, ಬೆಂಕಿಯ ಜ್ವಾಲೆಗೆ ನೂರಾರು ಎಕರೆ ಅರಣ್ಯ ಪ್ರದೇಶ ಸುಟ್ಟು ಕರಕಲಾಗಿದೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News