ಮಾತೆ ಮಹಾದೇವಿ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ
Update: 2019-03-14 15:56 GMT
ಬೆಂಗಳೂರು, ಮಾ. 14: ಐದು ದಶಕಗಳಿಗಿಂತಲೂ ಹೆಚ್ಚು ಕಾಲ ಲಿಂಗಾಯತ ಧರ್ಮ ಪ್ರಚಾರದಲ್ಲಿ ತೊಡಗಿಕೊಂಡಿದ್ದ ಬಸವ ಧರ್ಮ ಪೀಠದ ಮಾತೆ ಮಹಾದೇವಿ ಅವರ ನಿಧನ ಸಮಾಜಕ್ಕೆ ತುಂಬಲಾರದ ನಷ್ಟ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.
ಲಿಂಗಾಯತ ತತ್ವ ಪ್ರಚಾರದ ನಿಟ್ಟಿನಲ್ಲಿ ಅಸಂಖ್ಯಾತ ಕೃತಿಗಳನ್ನು ರಚಿಸಿದ ಮಾತೆ ಮಹಾದೇವಿ ಅವರು ಸಮಾಜವನ್ನು ಒಂದುಗೂಡಿಸುವುದರಲ್ಲಿ ನಿರತರಾಗಿದ್ದರು. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಭಕ್ತ ವರ್ಗಕ್ಕೆ ಆ ಭಗವಂತನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.