ಹೃದಯಾಘಾತ: ಕಚೇರಿಯಲ್ಲೇ ಬ್ಯಾಂಕ್ ಸಿಬ್ಬಂದಿ ಮೃತ್ಯು

Update: 2019-03-14 18:23 GMT

ಮೂಡಿಗೆರೆ, ಮಾ.14: ಹೃದಯಾಘಾತದಿಂದಾಗಿ ಬ್ಯಾಂಕ್ ಉಪ ವ್ಯವಸ್ಥಾಪಕಿಯೊಬ್ಬರು ಕರ್ತವ್ಯದಲ್ಲಿರುವಾಗಲೇ ಮೃತಪಟ್ಟ ಘಟನೆ ಪಟ್ಟಣದಲ್ಲಿ ಗುರುವಾರ ನಡೆದಿದೆ.

ಹಾಸನ ಜಿಲ್ಲೆಯ ಹೊಳೇನರಸೀಪುರ ಪಟ್ಟಣದ ನಿವಾಸಿ ಸುಜಾತಾ(53) ಮೃತ ಬ್ಯಾಂಕ್ ಉದ್ಯೋಗಿ ಎಂದು ತಿಳಿದು ಬಂದಿದ್ದು, ಇವರು ಎಂದಿನಂತೆ ಗುರುವಾರ ಬೆಳಗ್ಗೆ ಪಟ್ಟಣದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಶಾಖಾ ಕಚೇರಿಗೆ ಆಗಮಿಸಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ವೇಳೆ ಅವರು ತಮ್ಮ ಮುಂದಿದ್ದ ಕಂಪ್ಯೂಟರ್ ಮೇಲೆ ಕುಸಿದು ಬಿದ್ದರು. ಕೂಡಲೇ ಅವರನ್ನು ಬ್ಯಾಂಕ್‍ನ ಇತರ ಸಿಬ್ಬಂದಿ ಪಟ್ಟಣದ ತಾಲೂಕು ಆಸ್ಪತ್ರೆಗೆ ಕರೆ ತಂದರಾದರೂ ಅಷ್ಟರಲ್ಲಿ ಸುಜಾತ ಮೃತಪಟ್ಟಿದ್ದರೆಂದು ತಿಳಿದು ಬಂದಿದೆ.

ಸುಜಾತಾ ಅವರು ಕಳೆದ ನಾಲ್ಕು ತಿಂಗಳ ಹಿಂದೆ ಬೆಂಗಳೂರಿನ ಎಸ್‍ಬಿಐ ಶಾಖೆಯಿಂದ ಮೂಡಿಗೆರೆ ಪಟ್ಟಣದ ಶಾಖೆಗೆ ವರ್ಗಾವಣೆಗೊಂಡಿದ್ದರೆಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News